September 6, 2026
Uncategorized

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

ಬೆಳ್ತಂಗಡಿ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 21 ವರ್ಷ ಸೇವೆ ಸಲ್ಲಿಸಿರುವ ಬೆಳ್ತಂಗಡಿಯ ಗಣೇಶ್ ಬಿ.ಎಲ್. ಇವರು ಮೇ 2ರಂದು ನಿವೃತ್ತಿಯಾಗಿದ್ದು ಇಂದು (ಮೇ4) ಹುಟ್ಟೂರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನದಿಂದ ಮೆರವಣಿಗೆ ಮೂಲಕ ಅವರ ಲಾಯಿಲ ಮನೆಗೆ ಆಗಮಿಸಿದರು.

ಈ ವೇಳೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮರಾಟಿ ಸೇವಾ ಸಂಘದ ಉಮೇಶ್ ಕೇಲ್ತಡ್ಕ, ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಇವರ ಸೇವೆ ಬಗ್ಗೆ ಮಾತನಾಡಿ ಶುಭ ಕೋರಿದರು.

ನಿವೃತ್ತ ಯೋಧ ಗಣೇಶ್ ಬಿ.ಎಲ್ ಮಾತನಾಡಿ ಸೈನಿಕರಿಗೆ ನೀಡಿರುವ ಇಂತಹ ಗೌರವಕ್ಕೆ ಅಭಾರಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ, ನೋಟರಿ ವಕೀಲ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಬಿ.ಎಲ್, ಪದಾಧಿಕಾರಿಗಳು ಮತ್ತು ವಕೀಲರು, ಮರಾಟಿ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಕುಟುಂಬ ವರ್ಗದವರು, ನಾಗರಿಕರು ಉಪಸ್ಥಿತರಿದ್ದು ಶುಭ ಕೋರಿದರು.

ಮರಾಟಿ ಸೇವಾ ಸಂಘದ ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ್ ಬಡಕೊಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya
error: Content is protected !!