23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬೆಳ್ತಂಗಡಿ: ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೇ.3ರಂದು ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಜೊತೆ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲಿಯೇ ಬಗೆಹರಿಸುವ 26 ಅಂಶಗಳ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಹಲವು ಸಮಸ್ಯೆಗಳನ್ನು ಪಡೆದರು.

ಬೆಳ್ತಂಗಡಿ ಆಡಳಿತ ಸೌಧ ಭೇಟಿಯಲ್ಲಿ 94 CC, ಆಹಾರ ಇಲಾಖೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಣೆ ಸರಿಯಾಗಿ ಆಗುತ್ತಿಲ್ಲ, ವಿಧವ ವೇತನ ಬರುತ್ತಿಲ್ಲ, ಗೃಹ ಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರನ್ನು ಕರೆದು ಸ್ಥಳದಲ್ಲಿಯೇ ಪುಸ್ತಕ ದಾಖಲೆ ಹಾಗೂ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. 750 ಬಿಪಿಎಲ್ ಕಾರ್ಡ್ ಸಾರ್ವಜನಿಕರಿಗೆ ಸಿಗಲು ಬಾಕಿ ಇರುವ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ಶೀಘ್ರದಲ್ಲೇ ಪರಿಹರಿಸಲು ಸೂಚನೆ ನೀಡಿದ್ದಾರೆ. ಪುಂಜಾಲಕಟ್ಟೆಯ ಕುಕ್ಕಳ ಗ್ರಾಮದ ಸುನಿತಾ(32) ಎಂಬವರ ಗಂಡ ಅಶೋಕ್ ಸಾವನ್ನಪ್ಪಿದ ಬಳಿಕ ಏಳು ತಿಂಗಳಿನಿಂದ ಪಡಿತರ ಅಕ್ಕಿ ವಿತರಣೆ ಆಗದೆ ಹಲವಾರು ಭಾರಿ ಆಹಾರ ಇಲಾಖೆಯಲ್ಲಿ ಅಲೆದಾಟ ಮಾಡುತ್ತಿದ್ದ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ನೊಂದ ಮಹಿಳೆ ಸುನಿತಾ ಅವರನ್ನು ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸಿದಾಗ ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷದಿಂದ ಮಹಿಳೆಗೆ ಪಡಿತರ ದೊರಕದೆ ಏಳು ತಿಂಗಳಿನಿಂದ ಬಾಕಿಯಾಗಿರುವುದು ಪತ್ತೆಯಾಗಿದೆ. ತಕ್ಷಣ ಸ್ಥಳದಲ್ಲಿಯೇ ದಾಖಲೆಯನ್ನು ಸರಿಪಡಿಸಿ ಮಹಿಳೆಗೆ ಪಡಿತರ ಸಿಗುವಂತೆ ಲೋಕಾಯುಕ್ತ ಅಧಿಕಾರಿಗಳು ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ ಡಾ.ಗಾನ ಪಿ. ಕುಮಾರ್, ಚೆಲುವರಾಜ್, ಇನ್ಸೆಕ್ಟರ್ ಗಳಾದ ಅಮನುಲ್ಲಾ ಎ, ಸುರೇಶ್.ಕೆ.ಎನ್, ಸುರೇಶ್ ಸಿ.ಎಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya
error: Content is protected !!