24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

ಕೊಕ್ಕಡ: ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘ ಅರಸಿನಮಕ್ಕಿ ಇದರ ವಾಷಿ೯ಕೋತ್ಸವವು ಮೇ.2ರಂದು ಶ್ರೀಕಾಲಕಾಮ ಪರಶುರಾಮ ದೇವಸ್ಥಾನದ ಚಿತ್ಪಾವನ ಸಭಾ ಭವನ ದರ್ಬೆತಡ್ಕದಲ್ಲಿ ನಡೆಯಿತು.

ಪರಶುರಾಮ ದೇವರಿಗೆ ಪವಮಾನ ಅಭಿಷೇಕ, ಗಣಹೋಮ, ಸಮಾಜದ ವಟುಗಳಿಗೆ ಬ್ರಹ್ಮೋಪದೇಶ ನೀಡುವ ಕಾಯ೯ಕ್ರಮ ಜರಗಿತು.

ಬಳಿಕ ಸಂಘದ ಮಹಾಸಭೆ ಜರಗಿತು, ನೂತನ ಅಧ್ಯಕ್ಷರಾಗಿ ಶ್ರೀವರದ ಶಂಕರ ದಾಮಲೆ, ಕಾರ್ಯದಶಿ೯ಯಾಗಿ ವೆಂಕಟೇಶ ದಾಮಲೆ ಆಯ್ಕೆಯಾದರು.

ಮೇ.3ರಂದು ವೇದ ಕುಸುಮ ಶಿಬಿರವನ್ನು ಗೋಪಾಲ ಮರಾಠೆ ಫೋಕ೯ಳ, ವತ್ಸಲಾ ಅವರು ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಶಿಬಿರಾಥಿ೯ಗಳಿಗೆ ಯೋಗೀಶ ದಾಮಲೆಯವರು ಮಾತನಾಡಿ ಹಲವು ವರ್ಷಗಳಿಂದ ನಿರಂತರವಾಗಿ ವೇದ ಕುಸುಮ ಶಿಬಿರವು ಚಿತ್ಪಾವನ ಸಭಾ ಭವನದಲ್ಲಿ ಮೇ ತಿಂಗಳಲ್ಲಿ ನಡೆಯುತ್ತಾ ಬಂದಿದೆ. ಈ ಶಿಬಿರದಲ್ಲಿ ಸಮಾಜದ ಹಲವು ವಟುಗಳು ನಿತ್ಯಾಹ್ನಿಕ, ಸಂಧ್ಯಾವಂದನೆ ಮತ್ತು ಪೂಜಾ ವಿಧಿಗಳನ್ನು ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಾಥ೯ಕತೆಯನ್ನು ಪಡೆದಿರುವುದು ಹೆಮ್ಮೆಯ ವಿಷಯ ಹಾಗೂ ಶಿಬಿರವು ಮೇ.12ರ ವರೆಗೆ ನಡೆಯಲಿದೆ ಎಂದರು.

ಶಿಬಿರದಲ್ಲಿ ಸಮಾಜದ ವಟುಗಳಿಗೆ ಸಂಧ್ಯಾವಂದನೆ, ಅಥವ೯ಶೀಷ೯, ಪುರುಷ ಸೂಕ್ತ, ಪುಷ್ಪಾಂಜಲಿಗಳನ್ನು ಹತ್ತು ದಿನಗಳ ಕಾಲದವರೆಗೆ ಗುರುಕುಲ ಮಾದರಿಯಲ್ಲಿ ಕಲಿಸಲಾಗುವುದು. ಗುರುಗಳಾಗಿ ಗೋಪಾಲ ಮರಾಠೆಯವರು ಸೇವೆ ಸಲ್ಲಿಸುತ್ತಾರೆ,

Related posts

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya
error: Content is protected !!