April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

ಕೊಕ್ಕಡ: ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘ ಅರಸಿನಮಕ್ಕಿ ಇದರ ವಾಷಿ೯ಕೋತ್ಸವವು ಮೇ.2ರಂದು ಶ್ರೀಕಾಲಕಾಮ ಪರಶುರಾಮ ದೇವಸ್ಥಾನದ ಚಿತ್ಪಾವನ ಸಭಾ ಭವನ ದರ್ಬೆತಡ್ಕದಲ್ಲಿ ನಡೆಯಿತು.

ಪರಶುರಾಮ ದೇವರಿಗೆ ಪವಮಾನ ಅಭಿಷೇಕ, ಗಣಹೋಮ, ಸಮಾಜದ ವಟುಗಳಿಗೆ ಬ್ರಹ್ಮೋಪದೇಶ ನೀಡುವ ಕಾಯ೯ಕ್ರಮ ಜರಗಿತು.

ಬಳಿಕ ಸಂಘದ ಮಹಾಸಭೆ ಜರಗಿತು, ನೂತನ ಅಧ್ಯಕ್ಷರಾಗಿ ಶ್ರೀವರದ ಶಂಕರ ದಾಮಲೆ, ಕಾರ್ಯದಶಿ೯ಯಾಗಿ ವೆಂಕಟೇಶ ದಾಮಲೆ ಆಯ್ಕೆಯಾದರು.

ಮೇ.3ರಂದು ವೇದ ಕುಸುಮ ಶಿಬಿರವನ್ನು ಗೋಪಾಲ ಮರಾಠೆ ಫೋಕ೯ಳ, ವತ್ಸಲಾ ಅವರು ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಶಿಬಿರಾಥಿ೯ಗಳಿಗೆ ಯೋಗೀಶ ದಾಮಲೆಯವರು ಮಾತನಾಡಿ ಹಲವು ವರ್ಷಗಳಿಂದ ನಿರಂತರವಾಗಿ ವೇದ ಕುಸುಮ ಶಿಬಿರವು ಚಿತ್ಪಾವನ ಸಭಾ ಭವನದಲ್ಲಿ ಮೇ ತಿಂಗಳಲ್ಲಿ ನಡೆಯುತ್ತಾ ಬಂದಿದೆ. ಈ ಶಿಬಿರದಲ್ಲಿ ಸಮಾಜದ ಹಲವು ವಟುಗಳು ನಿತ್ಯಾಹ್ನಿಕ, ಸಂಧ್ಯಾವಂದನೆ ಮತ್ತು ಪೂಜಾ ವಿಧಿಗಳನ್ನು ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಾಥ೯ಕತೆಯನ್ನು ಪಡೆದಿರುವುದು ಹೆಮ್ಮೆಯ ವಿಷಯ ಹಾಗೂ ಶಿಬಿರವು ಮೇ.12ರ ವರೆಗೆ ನಡೆಯಲಿದೆ ಎಂದರು.

ಶಿಬಿರದಲ್ಲಿ ಸಮಾಜದ ವಟುಗಳಿಗೆ ಸಂಧ್ಯಾವಂದನೆ, ಅಥವ೯ಶೀಷ೯, ಪುರುಷ ಸೂಕ್ತ, ಪುಷ್ಪಾಂಜಲಿಗಳನ್ನು ಹತ್ತು ದಿನಗಳ ಕಾಲದವರೆಗೆ ಗುರುಕುಲ ಮಾದರಿಯಲ್ಲಿ ಕಲಿಸಲಾಗುವುದು. ಗುರುಗಳಾಗಿ ಗೋಪಾಲ ಮರಾಠೆಯವರು ಸೇವೆ ಸಲ್ಲಿಸುತ್ತಾರೆ,

Related posts

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya
error: Content is protected !!