23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

ಕೊಕ್ಕಡ: ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘ ಅರಸಿನಮಕ್ಕಿ ಇದರ ವಾಷಿ೯ಕೋತ್ಸವವು ಮೇ.2ರಂದು ಶ್ರೀಕಾಲಕಾಮ ಪರಶುರಾಮ ದೇವಸ್ಥಾನದ ಚಿತ್ಪಾವನ ಸಭಾ ಭವನ ದರ್ಬೆತಡ್ಕದಲ್ಲಿ ನಡೆಯಿತು.

ಪರಶುರಾಮ ದೇವರಿಗೆ ಪವಮಾನ ಅಭಿಷೇಕ, ಗಣಹೋಮ, ಸಮಾಜದ ವಟುಗಳಿಗೆ ಬ್ರಹ್ಮೋಪದೇಶ ನೀಡುವ ಕಾಯ೯ಕ್ರಮ ಜರಗಿತು.

ಬಳಿಕ ಸಂಘದ ಮಹಾಸಭೆ ಜರಗಿತು, ನೂತನ ಅಧ್ಯಕ್ಷರಾಗಿ ಶ್ರೀವರದ ಶಂಕರ ದಾಮಲೆ, ಕಾರ್ಯದಶಿ೯ಯಾಗಿ ವೆಂಕಟೇಶ ದಾಮಲೆ ಆಯ್ಕೆಯಾದರು.

ಮೇ.3ರಂದು ವೇದ ಕುಸುಮ ಶಿಬಿರವನ್ನು ಗೋಪಾಲ ಮರಾಠೆ ಫೋಕ೯ಳ, ವತ್ಸಲಾ ಅವರು ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಶಿಬಿರಾಥಿ೯ಗಳಿಗೆ ಯೋಗೀಶ ದಾಮಲೆಯವರು ಮಾತನಾಡಿ ಹಲವು ವರ್ಷಗಳಿಂದ ನಿರಂತರವಾಗಿ ವೇದ ಕುಸುಮ ಶಿಬಿರವು ಚಿತ್ಪಾವನ ಸಭಾ ಭವನದಲ್ಲಿ ಮೇ ತಿಂಗಳಲ್ಲಿ ನಡೆಯುತ್ತಾ ಬಂದಿದೆ. ಈ ಶಿಬಿರದಲ್ಲಿ ಸಮಾಜದ ಹಲವು ವಟುಗಳು ನಿತ್ಯಾಹ್ನಿಕ, ಸಂಧ್ಯಾವಂದನೆ ಮತ್ತು ಪೂಜಾ ವಿಧಿಗಳನ್ನು ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಾಥ೯ಕತೆಯನ್ನು ಪಡೆದಿರುವುದು ಹೆಮ್ಮೆಯ ವಿಷಯ ಹಾಗೂ ಶಿಬಿರವು ಮೇ.12ರ ವರೆಗೆ ನಡೆಯಲಿದೆ ಎಂದರು.

ಶಿಬಿರದಲ್ಲಿ ಸಮಾಜದ ವಟುಗಳಿಗೆ ಸಂಧ್ಯಾವಂದನೆ, ಅಥವ೯ಶೀಷ೯, ಪುರುಷ ಸೂಕ್ತ, ಪುಷ್ಪಾಂಜಲಿಗಳನ್ನು ಹತ್ತು ದಿನಗಳ ಕಾಲದವರೆಗೆ ಗುರುಕುಲ ಮಾದರಿಯಲ್ಲಿ ಕಲಿಸಲಾಗುವುದು. ಗುರುಗಳಾಗಿ ಗೋಪಾಲ ಮರಾಠೆಯವರು ಸೇವೆ ಸಲ್ಲಿಸುತ್ತಾರೆ,

Related posts

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!