September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

ಕೊಕ್ಕಡ: ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘ ಅರಸಿನಮಕ್ಕಿ ಇದರ ವಾಷಿ೯ಕೋತ್ಸವವು ಮೇ.2ರಂದು ಶ್ರೀಕಾಲಕಾಮ ಪರಶುರಾಮ ದೇವಸ್ಥಾನದ ಚಿತ್ಪಾವನ ಸಭಾ ಭವನ ದರ್ಬೆತಡ್ಕದಲ್ಲಿ ನಡೆಯಿತು.

ಪರಶುರಾಮ ದೇವರಿಗೆ ಪವಮಾನ ಅಭಿಷೇಕ, ಗಣಹೋಮ, ಸಮಾಜದ ವಟುಗಳಿಗೆ ಬ್ರಹ್ಮೋಪದೇಶ ನೀಡುವ ಕಾಯ೯ಕ್ರಮ ಜರಗಿತು.

ಬಳಿಕ ಸಂಘದ ಮಹಾಸಭೆ ಜರಗಿತು, ನೂತನ ಅಧ್ಯಕ್ಷರಾಗಿ ಶ್ರೀವರದ ಶಂಕರ ದಾಮಲೆ, ಕಾರ್ಯದಶಿ೯ಯಾಗಿ ವೆಂಕಟೇಶ ದಾಮಲೆ ಆಯ್ಕೆಯಾದರು.

ಮೇ.3ರಂದು ವೇದ ಕುಸುಮ ಶಿಬಿರವನ್ನು ಗೋಪಾಲ ಮರಾಠೆ ಫೋಕ೯ಳ, ವತ್ಸಲಾ ಅವರು ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಶಿಬಿರಾಥಿ೯ಗಳಿಗೆ ಯೋಗೀಶ ದಾಮಲೆಯವರು ಮಾತನಾಡಿ ಹಲವು ವರ್ಷಗಳಿಂದ ನಿರಂತರವಾಗಿ ವೇದ ಕುಸುಮ ಶಿಬಿರವು ಚಿತ್ಪಾವನ ಸಭಾ ಭವನದಲ್ಲಿ ಮೇ ತಿಂಗಳಲ್ಲಿ ನಡೆಯುತ್ತಾ ಬಂದಿದೆ. ಈ ಶಿಬಿರದಲ್ಲಿ ಸಮಾಜದ ಹಲವು ವಟುಗಳು ನಿತ್ಯಾಹ್ನಿಕ, ಸಂಧ್ಯಾವಂದನೆ ಮತ್ತು ಪೂಜಾ ವಿಧಿಗಳನ್ನು ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಾಥ೯ಕತೆಯನ್ನು ಪಡೆದಿರುವುದು ಹೆಮ್ಮೆಯ ವಿಷಯ ಹಾಗೂ ಶಿಬಿರವು ಮೇ.12ರ ವರೆಗೆ ನಡೆಯಲಿದೆ ಎಂದರು.

ಶಿಬಿರದಲ್ಲಿ ಸಮಾಜದ ವಟುಗಳಿಗೆ ಸಂಧ್ಯಾವಂದನೆ, ಅಥವ೯ಶೀಷ೯, ಪುರುಷ ಸೂಕ್ತ, ಪುಷ್ಪಾಂಜಲಿಗಳನ್ನು ಹತ್ತು ದಿನಗಳ ಕಾಲದವರೆಗೆ ಗುರುಕುಲ ಮಾದರಿಯಲ್ಲಿ ಕಲಿಸಲಾಗುವುದು. ಗುರುಗಳಾಗಿ ಗೋಪಾಲ ಮರಾಠೆಯವರು ಸೇವೆ ಸಲ್ಲಿಸುತ್ತಾರೆ,

Related posts

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಆಳ್ವಾಸ್ ವೈದ್ಯಕೀಯ  ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ: 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!