September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

ವಾಹನಗಳ ಮೇಲೆ ಹೈ ಸೇಫ್ಟಿ ರಿಜಿಸ್ಟ್ರೇಶನ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಮೇ 31 ವರೆಗೆ ಅವಕಾಶ ನೀಡಲಾಗಿದ್ದು ನಂಬರ್ ಪ್ಲೇಟ್ ಅಳವಡಿಸದಿದ್ದಾರೆ ದಂಡ ವಿಧಿಸುವ ಸಾಧ್ಯತೆ ಇದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಹೆಚ್.ಎಸ್ಆರ್ ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್‌ ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ. ಎರಡು ಗಡುವಿನ ವಿಸ್ತರಣೆಗಳ ಹೊರತಾಗಿಯೂ, ರಾಜ್ಯದಲ್ಲಿ ಕೇವಲ 34 ಲಕ್ಷ ಹೆಚ್.ಎಸ್ಆರ್ ಪಿ ಗಳು ಮಾತ್ರ ನೋಂದಾಯಿಸಲ್ಪಟ್ಟಿವೆ. ಹೆಚ್ಚುವರಿ ಸಾರಿಗೆ ಆಯುಕ್ತ (ಜಾರಿ) ಸಿ.ಮಲ್ಲಿಕಾರ್ಜುನ ಮಾತನಾಡಿ, ಫೆಬ್ರವರಿಯಿಂದ ಸುಮಾರು 18 ಲಕ್ಷ ನೋಂದಣಿಗಳು ನಡೆದಿವೆ ಮತ್ತು ಹೆಚ್ಚಿನ ವಾಹನಗಳು ಇನ್ನೂ ಹೆಚ್.ಎಸ್ಆರ್ ಪಿ ಯನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ.

ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರು, ಮಧ್ಯಮ, ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್ & ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ. ರಾಜ್ಯ ಸರ್ಕಾರವು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಮೇ.31ರವರೆಗೆ ಅವಕಾಶ ನೀಡಿದೆ. ರಾಜ್ಯ ಸಾರಿಗೆ ಇಲಾಖೆ ಮೇ. 31ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ.

ನಂತರ ಜೂ. 1 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

Suddi Udaya

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!