25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

ವಾಹನಗಳ ಮೇಲೆ ಹೈ ಸೇಫ್ಟಿ ರಿಜಿಸ್ಟ್ರೇಶನ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಮೇ 31 ವರೆಗೆ ಅವಕಾಶ ನೀಡಲಾಗಿದ್ದು ನಂಬರ್ ಪ್ಲೇಟ್ ಅಳವಡಿಸದಿದ್ದಾರೆ ದಂಡ ವಿಧಿಸುವ ಸಾಧ್ಯತೆ ಇದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಹೆಚ್.ಎಸ್ಆರ್ ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್‌ ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ. ಎರಡು ಗಡುವಿನ ವಿಸ್ತರಣೆಗಳ ಹೊರತಾಗಿಯೂ, ರಾಜ್ಯದಲ್ಲಿ ಕೇವಲ 34 ಲಕ್ಷ ಹೆಚ್.ಎಸ್ಆರ್ ಪಿ ಗಳು ಮಾತ್ರ ನೋಂದಾಯಿಸಲ್ಪಟ್ಟಿವೆ. ಹೆಚ್ಚುವರಿ ಸಾರಿಗೆ ಆಯುಕ್ತ (ಜಾರಿ) ಸಿ.ಮಲ್ಲಿಕಾರ್ಜುನ ಮಾತನಾಡಿ, ಫೆಬ್ರವರಿಯಿಂದ ಸುಮಾರು 18 ಲಕ್ಷ ನೋಂದಣಿಗಳು ನಡೆದಿವೆ ಮತ್ತು ಹೆಚ್ಚಿನ ವಾಹನಗಳು ಇನ್ನೂ ಹೆಚ್.ಎಸ್ಆರ್ ಪಿ ಯನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ.

ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರು, ಮಧ್ಯಮ, ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್ & ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ. ರಾಜ್ಯ ಸರ್ಕಾರವು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಮೇ.31ರವರೆಗೆ ಅವಕಾಶ ನೀಡಿದೆ. ರಾಜ್ಯ ಸಾರಿಗೆ ಇಲಾಖೆ ಮೇ. 31ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ.

ನಂತರ ಜೂ. 1 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya
error: Content is protected !!