September 6, 2026
Uncategorized

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

ಬೆಳ್ತಂಗಡಿ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 21 ವರ್ಷ ಸೇವೆ ಸಲ್ಲಿಸಿರುವ ಬೆಳ್ತಂಗಡಿಯ ಗಣೇಶ್ ಬಿ.ಎಲ್. ಇವರು ಮೇ 2ರಂದು ನಿವೃತ್ತಿಯಾಗಿದ್ದು ಇಂದು (ಮೇ4) ಹುಟ್ಟೂರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನದಿಂದ ಮೆರವಣಿಗೆ ಮೂಲಕ ಅವರ ಲಾಯಿಲ ಮನೆಗೆ ಆಗಮಿಸಿದರು.

ಈ ವೇಳೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮರಾಟಿ ಸೇವಾ ಸಂಘದ ಉಮೇಶ್ ಕೇಲ್ತಡ್ಕ, ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಇವರ ಸೇವೆ ಬಗ್ಗೆ ಮಾತನಾಡಿ ಶುಭ ಕೋರಿದರು.

ನಿವೃತ್ತ ಯೋಧ ಗಣೇಶ್ ಬಿ.ಎಲ್ ಮಾತನಾಡಿ ಸೈನಿಕರಿಗೆ ನೀಡಿರುವ ಇಂತಹ ಗೌರವಕ್ಕೆ ಅಭಾರಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ, ನೋಟರಿ ವಕೀಲ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಬಿ.ಎಲ್, ಪದಾಧಿಕಾರಿಗಳು ಮತ್ತು ವಕೀಲರು, ಮರಾಟಿ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಕುಟುಂಬ ವರ್ಗದವರು, ನಾಗರಿಕರು ಉಪಸ್ಥಿತರಿದ್ದು ಶುಭ ಕೋರಿದರು.

ಮರಾಟಿ ಸೇವಾ ಸಂಘದ ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ್ ಬಡಕೊಡಿ ಕಾರ್ಯಕ್ರಮ ನಿರೂಪಿಸಿದರು.

Related posts

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ನೇಮಕ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya
error: Content is protected !!