July 23, 2026
Uncategorized

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

ಬೆಳ್ತಂಗಡಿ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 21 ವರ್ಷ ಸೇವೆ ಸಲ್ಲಿಸಿರುವ ಬೆಳ್ತಂಗಡಿಯ ಗಣೇಶ್ ಬಿ.ಎಲ್. ಇವರು ಮೇ 2ರಂದು ನಿವೃತ್ತಿಯಾಗಿದ್ದು ಇಂದು (ಮೇ4) ಹುಟ್ಟೂರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನದಿಂದ ಮೆರವಣಿಗೆ ಮೂಲಕ ಅವರ ಲಾಯಿಲ ಮನೆಗೆ ಆಗಮಿಸಿದರು.

ಈ ವೇಳೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮರಾಟಿ ಸೇವಾ ಸಂಘದ ಉಮೇಶ್ ಕೇಲ್ತಡ್ಕ, ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಇವರ ಸೇವೆ ಬಗ್ಗೆ ಮಾತನಾಡಿ ಶುಭ ಕೋರಿದರು.

ನಿವೃತ್ತ ಯೋಧ ಗಣೇಶ್ ಬಿ.ಎಲ್ ಮಾತನಾಡಿ ಸೈನಿಕರಿಗೆ ನೀಡಿರುವ ಇಂತಹ ಗೌರವಕ್ಕೆ ಅಭಾರಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ, ನೋಟರಿ ವಕೀಲ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಬಿ.ಎಲ್, ಪದಾಧಿಕಾರಿಗಳು ಮತ್ತು ವಕೀಲರು, ಮರಾಟಿ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಕುಟುಂಬ ವರ್ಗದವರು, ನಾಗರಿಕರು ಉಪಸ್ಥಿತರಿದ್ದು ಶುಭ ಕೋರಿದರು.

ಮರಾಟಿ ಸೇವಾ ಸಂಘದ ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ್ ಬಡಕೊಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ. ರವರಿಗೆ 619 ಅಂಕ-ರಾಜ್ಯಕ್ಕೆ 7ನೇ ರ‍್ಯಾಂಕ್

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya
error: Content is protected !!