March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬೆಳ್ತಂಗಡಿ: ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೇ.3ರಂದು ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಜೊತೆ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲಿಯೇ ಬಗೆಹರಿಸುವ 26 ಅಂಶಗಳ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಹಲವು ಸಮಸ್ಯೆಗಳನ್ನು ಪಡೆದರು.

ಬೆಳ್ತಂಗಡಿ ಆಡಳಿತ ಸೌಧ ಭೇಟಿಯಲ್ಲಿ 94 CC, ಆಹಾರ ಇಲಾಖೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಣೆ ಸರಿಯಾಗಿ ಆಗುತ್ತಿಲ್ಲ, ವಿಧವ ವೇತನ ಬರುತ್ತಿಲ್ಲ, ಗೃಹ ಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರನ್ನು ಕರೆದು ಸ್ಥಳದಲ್ಲಿಯೇ ಪುಸ್ತಕ ದಾಖಲೆ ಹಾಗೂ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. 750 ಬಿಪಿಎಲ್ ಕಾರ್ಡ್ ಸಾರ್ವಜನಿಕರಿಗೆ ಸಿಗಲು ಬಾಕಿ ಇರುವ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ಶೀಘ್ರದಲ್ಲೇ ಪರಿಹರಿಸಲು ಸೂಚನೆ ನೀಡಿದ್ದಾರೆ. ಪುಂಜಾಲಕಟ್ಟೆಯ ಕುಕ್ಕಳ ಗ್ರಾಮದ ಸುನಿತಾ(32) ಎಂಬವರ ಗಂಡ ಅಶೋಕ್ ಸಾವನ್ನಪ್ಪಿದ ಬಳಿಕ ಏಳು ತಿಂಗಳಿನಿಂದ ಪಡಿತರ ಅಕ್ಕಿ ವಿತರಣೆ ಆಗದೆ ಹಲವಾರು ಭಾರಿ ಆಹಾರ ಇಲಾಖೆಯಲ್ಲಿ ಅಲೆದಾಟ ಮಾಡುತ್ತಿದ್ದ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ನೊಂದ ಮಹಿಳೆ ಸುನಿತಾ ಅವರನ್ನು ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸಿದಾಗ ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷದಿಂದ ಮಹಿಳೆಗೆ ಪಡಿತರ ದೊರಕದೆ ಏಳು ತಿಂಗಳಿನಿಂದ ಬಾಕಿಯಾಗಿರುವುದು ಪತ್ತೆಯಾಗಿದೆ. ತಕ್ಷಣ ಸ್ಥಳದಲ್ಲಿಯೇ ದಾಖಲೆಯನ್ನು ಸರಿಪಡಿಸಿ ಮಹಿಳೆಗೆ ಪಡಿತರ ಸಿಗುವಂತೆ ಲೋಕಾಯುಕ್ತ ಅಧಿಕಾರಿಗಳು ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ ಡಾ.ಗಾನ ಪಿ. ಕುಮಾರ್, ಚೆಲುವರಾಜ್, ಇನ್ಸೆಕ್ಟರ್ ಗಳಾದ ಅಮನುಲ್ಲಾ ಎ, ಸುರೇಶ್.ಕೆ.ಎನ್, ಸುರೇಶ್ ಸಿ.ಎಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya
error: Content is protected !!