27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

ಕೊಕ್ಕಡ: ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘ ಅರಸಿನಮಕ್ಕಿ ಇದರ ವಾಷಿ೯ಕೋತ್ಸವವು ಮೇ.2ರಂದು ಶ್ರೀಕಾಲಕಾಮ ಪರಶುರಾಮ ದೇವಸ್ಥಾನದ ಚಿತ್ಪಾವನ ಸಭಾ ಭವನ ದರ್ಬೆತಡ್ಕದಲ್ಲಿ ನಡೆಯಿತು.

ಪರಶುರಾಮ ದೇವರಿಗೆ ಪವಮಾನ ಅಭಿಷೇಕ, ಗಣಹೋಮ, ಸಮಾಜದ ವಟುಗಳಿಗೆ ಬ್ರಹ್ಮೋಪದೇಶ ನೀಡುವ ಕಾಯ೯ಕ್ರಮ ಜರಗಿತು.

ಬಳಿಕ ಸಂಘದ ಮಹಾಸಭೆ ಜರಗಿತು, ನೂತನ ಅಧ್ಯಕ್ಷರಾಗಿ ಶ್ರೀವರದ ಶಂಕರ ದಾಮಲೆ, ಕಾರ್ಯದಶಿ೯ಯಾಗಿ ವೆಂಕಟೇಶ ದಾಮಲೆ ಆಯ್ಕೆಯಾದರು.

ಮೇ.3ರಂದು ವೇದ ಕುಸುಮ ಶಿಬಿರವನ್ನು ಗೋಪಾಲ ಮರಾಠೆ ಫೋಕ೯ಳ, ವತ್ಸಲಾ ಅವರು ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಶಿಬಿರಾಥಿ೯ಗಳಿಗೆ ಯೋಗೀಶ ದಾಮಲೆಯವರು ಮಾತನಾಡಿ ಹಲವು ವರ್ಷಗಳಿಂದ ನಿರಂತರವಾಗಿ ವೇದ ಕುಸುಮ ಶಿಬಿರವು ಚಿತ್ಪಾವನ ಸಭಾ ಭವನದಲ್ಲಿ ಮೇ ತಿಂಗಳಲ್ಲಿ ನಡೆಯುತ್ತಾ ಬಂದಿದೆ. ಈ ಶಿಬಿರದಲ್ಲಿ ಸಮಾಜದ ಹಲವು ವಟುಗಳು ನಿತ್ಯಾಹ್ನಿಕ, ಸಂಧ್ಯಾವಂದನೆ ಮತ್ತು ಪೂಜಾ ವಿಧಿಗಳನ್ನು ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಾಥ೯ಕತೆಯನ್ನು ಪಡೆದಿರುವುದು ಹೆಮ್ಮೆಯ ವಿಷಯ ಹಾಗೂ ಶಿಬಿರವು ಮೇ.12ರ ವರೆಗೆ ನಡೆಯಲಿದೆ ಎಂದರು.

ಶಿಬಿರದಲ್ಲಿ ಸಮಾಜದ ವಟುಗಳಿಗೆ ಸಂಧ್ಯಾವಂದನೆ, ಅಥವ೯ಶೀಷ೯, ಪುರುಷ ಸೂಕ್ತ, ಪುಷ್ಪಾಂಜಲಿಗಳನ್ನು ಹತ್ತು ದಿನಗಳ ಕಾಲದವರೆಗೆ ಗುರುಕುಲ ಮಾದರಿಯಲ್ಲಿ ಕಲಿಸಲಾಗುವುದು. ಗುರುಗಳಾಗಿ ಗೋಪಾಲ ಮರಾಠೆಯವರು ಸೇವೆ ಸಲ್ಲಿಸುತ್ತಾರೆ,

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

Suddi Udaya
error: Content is protected !!