September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

ಕೊಕ್ಕಡ: ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘ ಅರಸಿನಮಕ್ಕಿ ಇದರ ವಾಷಿ೯ಕೋತ್ಸವವು ಮೇ.2ರಂದು ಶ್ರೀಕಾಲಕಾಮ ಪರಶುರಾಮ ದೇವಸ್ಥಾನದ ಚಿತ್ಪಾವನ ಸಭಾ ಭವನ ದರ್ಬೆತಡ್ಕದಲ್ಲಿ ನಡೆಯಿತು.

ಪರಶುರಾಮ ದೇವರಿಗೆ ಪವಮಾನ ಅಭಿಷೇಕ, ಗಣಹೋಮ, ಸಮಾಜದ ವಟುಗಳಿಗೆ ಬ್ರಹ್ಮೋಪದೇಶ ನೀಡುವ ಕಾಯ೯ಕ್ರಮ ಜರಗಿತು.

ಬಳಿಕ ಸಂಘದ ಮಹಾಸಭೆ ಜರಗಿತು, ನೂತನ ಅಧ್ಯಕ್ಷರಾಗಿ ಶ್ರೀವರದ ಶಂಕರ ದಾಮಲೆ, ಕಾರ್ಯದಶಿ೯ಯಾಗಿ ವೆಂಕಟೇಶ ದಾಮಲೆ ಆಯ್ಕೆಯಾದರು.

ಮೇ.3ರಂದು ವೇದ ಕುಸುಮ ಶಿಬಿರವನ್ನು ಗೋಪಾಲ ಮರಾಠೆ ಫೋಕ೯ಳ, ವತ್ಸಲಾ ಅವರು ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಶಿಬಿರಾಥಿ೯ಗಳಿಗೆ ಯೋಗೀಶ ದಾಮಲೆಯವರು ಮಾತನಾಡಿ ಹಲವು ವರ್ಷಗಳಿಂದ ನಿರಂತರವಾಗಿ ವೇದ ಕುಸುಮ ಶಿಬಿರವು ಚಿತ್ಪಾವನ ಸಭಾ ಭವನದಲ್ಲಿ ಮೇ ತಿಂಗಳಲ್ಲಿ ನಡೆಯುತ್ತಾ ಬಂದಿದೆ. ಈ ಶಿಬಿರದಲ್ಲಿ ಸಮಾಜದ ಹಲವು ವಟುಗಳು ನಿತ್ಯಾಹ್ನಿಕ, ಸಂಧ್ಯಾವಂದನೆ ಮತ್ತು ಪೂಜಾ ವಿಧಿಗಳನ್ನು ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಾಥ೯ಕತೆಯನ್ನು ಪಡೆದಿರುವುದು ಹೆಮ್ಮೆಯ ವಿಷಯ ಹಾಗೂ ಶಿಬಿರವು ಮೇ.12ರ ವರೆಗೆ ನಡೆಯಲಿದೆ ಎಂದರು.

ಶಿಬಿರದಲ್ಲಿ ಸಮಾಜದ ವಟುಗಳಿಗೆ ಸಂಧ್ಯಾವಂದನೆ, ಅಥವ೯ಶೀಷ೯, ಪುರುಷ ಸೂಕ್ತ, ಪುಷ್ಪಾಂಜಲಿಗಳನ್ನು ಹತ್ತು ದಿನಗಳ ಕಾಲದವರೆಗೆ ಗುರುಕುಲ ಮಾದರಿಯಲ್ಲಿ ಕಲಿಸಲಾಗುವುದು. ಗುರುಗಳಾಗಿ ಗೋಪಾಲ ಮರಾಠೆಯವರು ಸೇವೆ ಸಲ್ಲಿಸುತ್ತಾರೆ,

Related posts

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!