23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

ಉಜಿರೆ: : ನಮ್ಮ ತಾಯಿ, ಮಾತೃಭೂಮಿ ಸ್ವರ್ಗಕ್ಕಿಂತ ಮಿಗಿಲಾದುದು. ತಾಯಿ ಭಾಷೆ ಹೃದಯದ ಭಾಷೆ . ರಾಜ್ಯದಲ್ಲಿ  ಮಾತೃ ಭಾಷೆಗೆ  ಪ್ರಾಧಾನ್ಯತೆ ಇದ್ದರೂ ರಾಜಧಾನಿಯಲ್ಲೇ  ಕನ್ನಡದ  ಉಳಿವಿಗೆ  ಸವಾಲು ಎದುರಾಗಿದೆ. ಕಾರಣ  ಅನ್ಯಭಾಷಿಗರ  ಆಕ್ರಮಣ! ಕನ್ನಡ ಭಾಷೆಯನ್ನು ಮುಂದಿನ ಅನೇಕ ವರ್ಷಗಳವರೆಗೆ ಜೀವಂತವಾಗಿರಿಸಲು ಕನ್ನಡ ನಾಡು, ನುಡಿ, ಸಂಸ್ಕೃತಿ ಭಾಷೆಯ ಸಂವರ್ಧನೆಗೆ  ಭಾಷೆಯ ಆಸ್ಮಿತೆಯಾದ ಕನ್ನಡ ಸಾಹಿತ್ಯ ಪರಿಷತ್ತನ್ನು ಬಲಗೊಳಿಸೋಣ ಎಂದು ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ  ಪ್ರಾಂಶುಪಾಲ  ಡಾ| ಬಿ.ಎ.ಕುಮಾರ ಹೆಗ್ಡೆ  ನುಡಿದರು.

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ  ಆಶ್ರಯದಲ್ಲಿ ಮೇ 5 ರಂದು ಉಜಿರೆ ಶ್ರೀ ಸಿದ್ಧವನ ಗುರುಕುಲದಲ್ಲಿ ಆಯೋಜಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ 11೦ನೇ  ಸಂಸ್ಥಾಪನಾ  ದಿನಾಚರಣೆ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೊಬೈಲ್, ಫಾಸ್ಟ್‌ಫುಡ್ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ  ಓದುವ, ಬರೆಯುವ ಹವ್ಯಾಸ ಮರೆಯಾಗುತ್ತಿದೆ. ಅದಕ್ಕಾಗಿ ಪ್ರತಿ ಹೋಬಳಿ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ  ಕನ್ನಡ ಭಾಷೆಯಲ್ಲಿ ಸಂವಾದ, ಕವಿ, ಕವನಗಳನ್ನು  ಬೆಂಬಲಿಸುವ, ಕನ್ನಡ ಭಾ ಷೆಯಲ್ಲಿ ಬರೆಯುವ ಕಾರ್‍ಯಕ್ರಮ ಹಮ್ಮಿಕೊಳ್ಳ ಬೇಕಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಶ್ರೇಷ್ಠವಾದದ್ದು ತನ್ನತ್ತ ಆವರಿಸುವ ಸಲುವಾಗಿ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ ಎಂದು ಕರೆ ನೀಡಿದರು.

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್  ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭಾಷೆಯ ಸಮೃದ್ಧಿಗೆ  ಜಿಲ್ಲೆಯಲ್ಲಿ  ಕಳೆದ ಎರಡೂವರೆ ವರ್ಷದಲ್ಲಿ  4೦೦ಕ್ಕಿಂತ ಅಧಿ ಕ ಕಾರ್‍ಯಕ್ರಮಗಳನ್ನು  ನಡೆಸಿ ಸಾಹಿತ್ಯವನ್ನು  ಮನೆ ಮನೆಗೆ  ತಲುಪಿಸುವ ಕಾರ್ಯ ಕೈಗೊಳ್ಳಲಾಗಿದೆ. ಜಿಲ್ಲೆಯ 9 ತಾಲೂಕುಗಳಲ್ಲಿ ಇಂದು ಸಂಸ್ಥಾಪಕ ದಿನಾಚರಣೆ ಆಯೋಜಿಸಲಾಗಿದೆ, ತಾಲೂಕು, ಹೋಬಳಿ ಮಟ್ಟದಲ್ಲಿ ಘಟಕ ಸ್ಥಾಪಿಸಿ ಗ್ರಾಮ ಸಂಚಾಲಕರ ಮೂಲಕ  ಕನ್ನಡ ಭಾಷೆಯ  ಚಟುವಟಿಕೆಗಳನ್ನು ನಡೆಸಲಾಗುವುದು  ಎಂದರು.   ಸಂಪನ್ಮೂಲ ವ್ಯಕ್ತಿ ಪುತ್ತೂರು ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗ ಮುಖ್ಯಸ್ಥ ಡಾ| ಶ್ರೀಶ ಕುಮಾರ ಎಂ.ಕೆ. ಉಪನ್ಯಾಸ ನೀಡಿ, ಒಂದು ಭಾಷೆ, ಸಾಹಿತ್ಯ ಮೇಲ್ನೋಟಕ್ಕೆ ಅದಾಗಿ  ತೆರೆದುಕೊಳ್ಳುವುದಿಲ್ಲ. ಸಾಹಿತ್ಯ  ಶಬ್ಧ ಮತ್ತು ಅರ್ಥಗಳ ಮಂಜುಳ ಸಂಯೋಜನೆ ಸಮಾಜಕ್ಕೆ ಹಿತವಾದ ಸಾಹಿತ್ಯ ನೀಡುವ ಸಾಹಿತ್ಯ ಕೃಷಿ ಬೆಳೆಯಬೇಕಿದೆ. ಆದರೆ ಇಂದು ವಿಕೃತಿಯೆಡೆಗೆ ಕೊಂಡೊಯ್ಯುವ ಸಾಹಿತ್ಯದಿಂದ ಅಪಾಯವಿದೆ. ನಮ್ಮನ್ನು ಜೀವನ ಪರ್ಯಂತ ಉಳಿಸಿಕೊಳ್ಳಬಹುದಾದ ಹವ್ಯಾಸ ಇದ್ದರೆ ಅದು ಓದುವ ಹವ್ಯಾಸ ಎಂದ ಅವರು ಎಲ್ಲ ಭಾಷೆಗಳನ್ನು  ಗೌರವಿಸಿ, ಕನ್ನಡ ಭಾಷೆಯನ್ನು ಪ್ರೀತಿಸಿ.  ನಮ್ಮ ಕನ್ನಡ ಭಾಷಾ ಸಂಸ್ಕೃತಿಯಿಂದ ಸಾಹಿತ್ಯವನ್ನು ಗಟ್ಟಿಗೊಳಿಸುವ ಕೆಲಸವಾಗಲಿ. ಸಾಹಿತ್ಯ ಯಾವತ್ತೂ ವಿಕೃತಿಯ ಕಡೆಗೆ ಕೊಂಡುಹೋಗಬಾರದು. ಪ್ರಕೃತಿ ಸಂಸ್ಕೃತಿಯಾಗಿ ಪರಿವರ್ತನೆಯಾಗುವ ಸಾಹಿತ್ಯ  ಸೃಷ್ಟಿಯಾಗಬೇಕು. ಸಂಸ್ಕೃತಿಯಿಂದ ಸಾಹಿತ್ಯವನ್ನು ಗಟ್ಟಿಗೊಳಿಸುವ ಪ್ರಯತ್ನ ನಡೆಸಬೇಕು ಎಂದರು. 

ಕ.ಸಾ.ಪ  ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಡಾ| ಮಾಧವ ಎಂ.ಕೆ. ಮಾತನಾಡಿ, ಭಾರತ ದೇಶ ಇತರ ದೇಶದ ಮೇಲೆ ದಾಳಿ ಮಾಡಿರುವ ಇತಿಹಾಸವಿಲ್ಲ, ಆದರೆ ಭಾರತದ ಮೇಲೆ ಆಗಿರುವ ದಾಳಿಗಳು ಭಾಷೆಯ ಮೇಲೂ ಪರಿಣಾಮ ಬೀರಿದೆ. ಅದಕ್ಕೆ ಬ್ರಿಟೀಷರಿಂದ ಭಾ ರತದಲ್ಲಿ ಆಂಗ್ಲ ಶಿಕ್ಷಣ ಪದ್ಧತಿ ಪರಿಣಾಮ ಬೀರಿರುವುದೇ ಸಾಕ್ಷಿ. ಇಂದು ಶಿಕ್ಷಣ ಪದ್ಧತಿ ವ್ಯಾಪರೀಕರಣವಾಗಿದೆ. ನಮ್ಮ ಡೀಮ್ಡ್ ವಿ. ವಿ. ಗಳು ನಮ್ಮ ದೇಶೀಯ ಭಾ ಷೆಯನ್ನು ಅಳಿಸಿ ಪಾಶ್ಚಾತ್ತೀಕರಣವಾಗಿಸುತ್ತ ವಾಲುತ್ತಿದೆ. . ಹೀಗಾಗಿ ಕನ್ನಡ ಭಾಷೆಯ  ಕೀಳರಿಮೆಯಿಂದ ಹೊರಬರದೇ ಹೋದಲ್ಲಿ ಕನ್ನಡದ ಉಳಿವು ಸವಾಲಾಗಲಿದೆ . ಈ ನಿಟ್ಟಿನಲ್ಲಿ  ಗಮನ ಸೆಳೆಯುವ ಅಥವಾ ಹೋರಾಟ ನಡೆಸುವ ಪ್ರಯತ್ನವಾಗಬೇಕಾಗಿದೆ . ಭಾರತೀಯ  ಭಾಷೆಗಳ  ಮೇಲೆ   ನಡೆ ಯುತ್ತಿರುವ ಪ್ರಹಾರವನ್ನು  ತಡೆಗಟ್ಟಬೇಕಾಗಿದೆ ಎಂದು ವಿಶ್ಲೇಷಿಸಿದರು.

ನಿವೃತ್ತ  ಪ್ರಾಚಾರ್ಯ ಕೃಷ್ಣಪ್ಪ ಪೂಜಾರಿ  ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ  ಪರಿಷತ್ತು ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು ಸ್ವಾಗತಿಸಿ,  ಕಾರ್‍ಯಕ್ರಮ ನಿರ್ವಹಿಸಿ,ವಂದಿಸಿದರು. 

Related posts

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya
error: Content is protected !!