July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024 ನೇ ಸಾಲಿನ ನೇಮಕಾತಿ ಪ್ರಕ್ರಿಯೆಗಳ ಉದ್ಘಾಟನಾ ಸಮಾರಂಭ ಮೇ 6 ರಂದು ನಡೆಯಿತು.

ಹುಂಡೈ ಕಂಪನಿಯ ಜನರಲ್ ಮ್ಯಾನೇಜರ್ (ಸರ್ವಿಸ್) ಆನಂದ್ ರವರು ದೀಪ ಪ್ರಜ್ವಲ್ವನೆಯ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ವೇಣೂರು ಐಟಿಐಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ದೇಶ ವಿದೇಶಗಳಲ್ಲಿ ಬೇಡಿಕೆ ಇದೆ ಎಂದು ಹೇಳಿದರು. ಶಿಸ್ತು ಮತ್ತು ಸಮಯ ಪಾಲನೆ ಮೈಗೂಡಿಸಿಕೊಂಡಿರುವ ಸಂಸ್ಥೆಯ ವಿದ್ಯಾರ್ಥಿಗಳು ಹುಂಡೈ ಕಂಪನಿಯಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆಆರ್ ಅವರು ಸ್ವಾಗತಿಸಿ, ಪ್ರಾಸ್ತವಿಕ ನುಡಿಗಳನ್ನು ಆಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಹುಂಡೈ ಕಂಪನಿಯ ತರಬೇತಿ ಮುಖ್ಯಸ್ಥ ಅರುಣ್ ಹಾಗೂ ತರಬೇತುದಾರ ಕಾರ್ತಿಕ್ ಉಪಸ್ಥಿತರಿದ್ದರು.

ಸಂದರ್ಶನದಲ್ಲಿ ವಿವಿಧ ಐಟಿಐಗಳ 140 ವಿದ್ಯಾರ್ಥಿಗಳು ಭಾಗವಹಿಸಿದರು. ಕಿರಿಯ ತರಬೇತಿ ಅಧಿಕಾರಿ ಸತೀಶ್ ಕಾರ್ಯಕ್ರಮ ನಿರ್ವಹಿಸಿ, ವಿದ್ಯಾರ್ಥಿ ಪ್ರಶ್ಮಿತ್ ಪ್ರಾರ್ಥನೆಗೈದರೆ, ಕೃಷ್ಣ ಕಿರಿಯ ತರಬೇತಿ ಅಧಿಕಾರಿ ಶ್ರೀಧರ ಡಿ. ವಂದಿಸಿದರು.

Related posts

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya
error: Content is protected !!