23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

ಬೆಳ್ತಂಗಡಿ : ಪುತ್ತೂರಿನ ಸುಧನ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಲಿಯೋ ಕ್ಲಬ್ ಜಿಲ್ಲೆ 317 ಡಿ ವತಿಯಿಂದ ನಡೆದ ಜಿಲ್ಲಾ ವಾರ್ಷಿಕ ಲಿಯೋ ಮೀಟ್ “ಸುಧನ” ಮೇ 05 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಲಿಯೋ ಕ್ಲಬ್ ಗೆ ಈ ವರ್ಷ ಉದಯೋನ್ಮುಖ ನಕ್ಷತ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಉತ್ತಮ ಪ್ರಾಯೋಜಕತ್ವ ಕ್ಲಬ್ ಎಂದು ಜಿಲ್ಲಾ ಲಿಯೋ ಅಧ್ಯಕ್ಷರಾದ ರಂಜಿತಾ ಶೆಟ್ಟಿ, ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿ ಸೋಜ ಹಾಗೂ ಜಿಲ್ಲಾ ತಂಡದವರು ಗೌರವಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು ಹಾಗೂ ಲಿಯೊ ಅಡ್ವೈಸರ್ ಲ.ಡಾ. ದೇವಿಪ್ರಸಾದ್ ಬೊಲ್ಮ,, ಲ. ರಾಮಕೃಷ್ಣ ಗೌಡ, ಲ.ತುಕಾರಾಮ್, ಲ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ,, ಲಿಯೋ ಸದಸ್ಯರಾದ ಡಾ. ಸುಶ್ಮಿತಾ, ಡಾ. ಚಿರನ್ವಿ, ನಿಕ್ಷೇಪ್, ಸಂಪತ್, ಅಕ್ಷಯ್, ಮನೋಜ್, ದೀಕ್ಷಿತ್, ಗ್ಲೆನ್, ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya
error: Content is protected !!