30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024 ನೇ ಸಾಲಿನ ನೇಮಕಾತಿ ಪ್ರಕ್ರಿಯೆಗಳ ಉದ್ಘಾಟನಾ ಸಮಾರಂಭ ಮೇ 6 ರಂದು ನಡೆಯಿತು.

ಹುಂಡೈ ಕಂಪನಿಯ ಜನರಲ್ ಮ್ಯಾನೇಜರ್ (ಸರ್ವಿಸ್) ಆನಂದ್ ರವರು ದೀಪ ಪ್ರಜ್ವಲ್ವನೆಯ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ವೇಣೂರು ಐಟಿಐಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ದೇಶ ವಿದೇಶಗಳಲ್ಲಿ ಬೇಡಿಕೆ ಇದೆ ಎಂದು ಹೇಳಿದರು. ಶಿಸ್ತು ಮತ್ತು ಸಮಯ ಪಾಲನೆ ಮೈಗೂಡಿಸಿಕೊಂಡಿರುವ ಸಂಸ್ಥೆಯ ವಿದ್ಯಾರ್ಥಿಗಳು ಹುಂಡೈ ಕಂಪನಿಯಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆಆರ್ ಅವರು ಸ್ವಾಗತಿಸಿ, ಪ್ರಾಸ್ತವಿಕ ನುಡಿಗಳನ್ನು ಆಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಹುಂಡೈ ಕಂಪನಿಯ ತರಬೇತಿ ಮುಖ್ಯಸ್ಥ ಅರುಣ್ ಹಾಗೂ ತರಬೇತುದಾರ ಕಾರ್ತಿಕ್ ಉಪಸ್ಥಿತರಿದ್ದರು.

ಸಂದರ್ಶನದಲ್ಲಿ ವಿವಿಧ ಐಟಿಐಗಳ 140 ವಿದ್ಯಾರ್ಥಿಗಳು ಭಾಗವಹಿಸಿದರು. ಕಿರಿಯ ತರಬೇತಿ ಅಧಿಕಾರಿ ಸತೀಶ್ ಕಾರ್ಯಕ್ರಮ ನಿರ್ವಹಿಸಿ, ವಿದ್ಯಾರ್ಥಿ ಪ್ರಶ್ಮಿತ್ ಪ್ರಾರ್ಥನೆಗೈದರೆ, ಕೃಷ್ಣ ಕಿರಿಯ ತರಬೇತಿ ಅಧಿಕಾರಿ ಶ್ರೀಧರ ಡಿ. ವಂದಿಸಿದರು.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಕಳಿಯ ‘ಬಿ’ ಕಾರ್ಯಕ್ಷೇತ್ರದಿಂದ ಸುರಕ್ಷ ಯೋಜನೆ ಅಡಿಯಲ್ಲಿ ಗೀತಾ ರವರಿಗೆ ಚೆಕ್ ಹಸ್ತಾಂತರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!