24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024 ನೇ ಸಾಲಿನ ನೇಮಕಾತಿ ಪ್ರಕ್ರಿಯೆಗಳ ಉದ್ಘಾಟನಾ ಸಮಾರಂಭ ಮೇ 6 ರಂದು ನಡೆಯಿತು.

ಹುಂಡೈ ಕಂಪನಿಯ ಜನರಲ್ ಮ್ಯಾನೇಜರ್ (ಸರ್ವಿಸ್) ಆನಂದ್ ರವರು ದೀಪ ಪ್ರಜ್ವಲ್ವನೆಯ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ವೇಣೂರು ಐಟಿಐಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ದೇಶ ವಿದೇಶಗಳಲ್ಲಿ ಬೇಡಿಕೆ ಇದೆ ಎಂದು ಹೇಳಿದರು. ಶಿಸ್ತು ಮತ್ತು ಸಮಯ ಪಾಲನೆ ಮೈಗೂಡಿಸಿಕೊಂಡಿರುವ ಸಂಸ್ಥೆಯ ವಿದ್ಯಾರ್ಥಿಗಳು ಹುಂಡೈ ಕಂಪನಿಯಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆಆರ್ ಅವರು ಸ್ವಾಗತಿಸಿ, ಪ್ರಾಸ್ತವಿಕ ನುಡಿಗಳನ್ನು ಆಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಹುಂಡೈ ಕಂಪನಿಯ ತರಬೇತಿ ಮುಖ್ಯಸ್ಥ ಅರುಣ್ ಹಾಗೂ ತರಬೇತುದಾರ ಕಾರ್ತಿಕ್ ಉಪಸ್ಥಿತರಿದ್ದರು.

ಸಂದರ್ಶನದಲ್ಲಿ ವಿವಿಧ ಐಟಿಐಗಳ 140 ವಿದ್ಯಾರ್ಥಿಗಳು ಭಾಗವಹಿಸಿದರು. ಕಿರಿಯ ತರಬೇತಿ ಅಧಿಕಾರಿ ಸತೀಶ್ ಕಾರ್ಯಕ್ರಮ ನಿರ್ವಹಿಸಿ, ವಿದ್ಯಾರ್ಥಿ ಪ್ರಶ್ಮಿತ್ ಪ್ರಾರ್ಥನೆಗೈದರೆ, ಕೃಷ್ಣ ಕಿರಿಯ ತರಬೇತಿ ಅಧಿಕಾರಿ ಶ್ರೀಧರ ಡಿ. ವಂದಿಸಿದರು.

Related posts

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯಿಂದ ಡಾ.ಡಿ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya
error: Content is protected !!