ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ಬೆಳ್ತಂಗಡಿ: 2011 ಮೇ 3 ರಂದು ದುಷ್ಟರ ಅಟ್ಟಹಾಸ ಕ್ಕೆ ಬಲಿಯಾದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆಯನ್ನು ಶಾಲಿನಿ ಸೇವಾ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು.

ಗರ್ಡಾಡಿ ಗುಜ್ಜೋಟ್ಟು ನಲ್ಲಿ ಭಾವಚಿತ್ರಕ್ಕೆ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಸೇವಾ ರೂಪವಾಗಿ ಬೆಳ್ತಂಗಡಿ ಕೊಯ್ಯೂರಿನಲ್ಲಿರುವ ವಿಮುಕ್ತಿ ಬುದ್ಧಿಮಾಂದ್ಯ ಮಕ್ಕಳ ಕೇಂದ್ರಕ್ಕೆ ಭೇಟಿಕೊಟ್ಟು ಮಕ್ಕಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಕೊಡಲಾಯಿತು.

ಅಲ್ಲಿಯ ಗುರುಗಳು ಶಾಲಿನಿ ಸೇವಾ ಪ್ರತಿಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನು ಮುಂದೆಯೂ ನಿಮ್ಮ ಸಮಾಜ ಸೇವೆ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಿನಿ ಸೇವಾ ಪ್ರತಿಷ್ಠಾನದ ಸಂಚಾಲಕರಾದ ತಾರಾನಾಥ ಶೆಟ್ಟಿ, ಶ್ರೀಮತಿ ಜಯಶ್ರೀ ಶೆಟ್ಟಿ, ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Leave a Comment

error: Content is protected !!