23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024 ನೇ ಸಾಲಿನ ನೇಮಕಾತಿ ಪ್ರಕ್ರಿಯೆಗಳ ಉದ್ಘಾಟನಾ ಸಮಾರಂಭ ಮೇ 6 ರಂದು ನಡೆಯಿತು.

ಹುಂಡೈ ಕಂಪನಿಯ ಜನರಲ್ ಮ್ಯಾನೇಜರ್ (ಸರ್ವಿಸ್) ಆನಂದ್ ರವರು ದೀಪ ಪ್ರಜ್ವಲ್ವನೆಯ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ವೇಣೂರು ಐಟಿಐಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ದೇಶ ವಿದೇಶಗಳಲ್ಲಿ ಬೇಡಿಕೆ ಇದೆ ಎಂದು ಹೇಳಿದರು. ಶಿಸ್ತು ಮತ್ತು ಸಮಯ ಪಾಲನೆ ಮೈಗೂಡಿಸಿಕೊಂಡಿರುವ ಸಂಸ್ಥೆಯ ವಿದ್ಯಾರ್ಥಿಗಳು ಹುಂಡೈ ಕಂಪನಿಯಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆಆರ್ ಅವರು ಸ್ವಾಗತಿಸಿ, ಪ್ರಾಸ್ತವಿಕ ನುಡಿಗಳನ್ನು ಆಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಹುಂಡೈ ಕಂಪನಿಯ ತರಬೇತಿ ಮುಖ್ಯಸ್ಥ ಅರುಣ್ ಹಾಗೂ ತರಬೇತುದಾರ ಕಾರ್ತಿಕ್ ಉಪಸ್ಥಿತರಿದ್ದರು.

ಸಂದರ್ಶನದಲ್ಲಿ ವಿವಿಧ ಐಟಿಐಗಳ 140 ವಿದ್ಯಾರ್ಥಿಗಳು ಭಾಗವಹಿಸಿದರು. ಕಿರಿಯ ತರಬೇತಿ ಅಧಿಕಾರಿ ಸತೀಶ್ ಕಾರ್ಯಕ್ರಮ ನಿರ್ವಹಿಸಿ, ವಿದ್ಯಾರ್ಥಿ ಪ್ರಶ್ಮಿತ್ ಪ್ರಾರ್ಥನೆಗೈದರೆ, ಕೃಷ್ಣ ಕಿರಿಯ ತರಬೇತಿ ಅಧಿಕಾರಿ ಶ್ರೀಧರ ಡಿ. ವಂದಿಸಿದರು.

Related posts

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya
error: Content is protected !!