22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024 ನೇ ಸಾಲಿನ ನೇಮಕಾತಿ ಪ್ರಕ್ರಿಯೆಗಳ ಉದ್ಘಾಟನಾ ಸಮಾರಂಭ ಮೇ 6 ರಂದು ನಡೆಯಿತು.

ಹುಂಡೈ ಕಂಪನಿಯ ಜನರಲ್ ಮ್ಯಾನೇಜರ್ (ಸರ್ವಿಸ್) ಆನಂದ್ ರವರು ದೀಪ ಪ್ರಜ್ವಲ್ವನೆಯ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ವೇಣೂರು ಐಟಿಐಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ದೇಶ ವಿದೇಶಗಳಲ್ಲಿ ಬೇಡಿಕೆ ಇದೆ ಎಂದು ಹೇಳಿದರು. ಶಿಸ್ತು ಮತ್ತು ಸಮಯ ಪಾಲನೆ ಮೈಗೂಡಿಸಿಕೊಂಡಿರುವ ಸಂಸ್ಥೆಯ ವಿದ್ಯಾರ್ಥಿಗಳು ಹುಂಡೈ ಕಂಪನಿಯಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆಆರ್ ಅವರು ಸ್ವಾಗತಿಸಿ, ಪ್ರಾಸ್ತವಿಕ ನುಡಿಗಳನ್ನು ಆಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಹುಂಡೈ ಕಂಪನಿಯ ತರಬೇತಿ ಮುಖ್ಯಸ್ಥ ಅರುಣ್ ಹಾಗೂ ತರಬೇತುದಾರ ಕಾರ್ತಿಕ್ ಉಪಸ್ಥಿತರಿದ್ದರು.

ಸಂದರ್ಶನದಲ್ಲಿ ವಿವಿಧ ಐಟಿಐಗಳ 140 ವಿದ್ಯಾರ್ಥಿಗಳು ಭಾಗವಹಿಸಿದರು. ಕಿರಿಯ ತರಬೇತಿ ಅಧಿಕಾರಿ ಸತೀಶ್ ಕಾರ್ಯಕ್ರಮ ನಿರ್ವಹಿಸಿ, ವಿದ್ಯಾರ್ಥಿ ಪ್ರಶ್ಮಿತ್ ಪ್ರಾರ್ಥನೆಗೈದರೆ, ಕೃಷ್ಣ ಕಿರಿಯ ತರಬೇತಿ ಅಧಿಕಾರಿ ಶ್ರೀಧರ ಡಿ. ವಂದಿಸಿದರು.

Related posts

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya
error: Content is protected !!