23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜು ಪುತ್ತೂರಿನ ಪರೀಕ್ಷಾಂಗ ಕುಲ ಸಚಿವರಾದ ಡಾ. ಶ್ರೀಧರ್ ಎಚ್ ಜಿ ಇವರು ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸಮರ್ಪಣ ಭಾವ ಹೆಚ್ಚಾದಾಗ ಜೀವನದಲ್ಲಿ ಅವರು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಹಾಗೂ ಇಂದಿನ ಆಧುನಿಕ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡಾಗ ಅವರ ಕೌಶಲ್ಯವನ್ನು ಹೆಚ್ಚಿಸಿಕೊಂಡು ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ ಎನ್ ವಹಿಸಿದ್ದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ.ಸುಬ್ರಹ್ಮಣ್ಯ ಕೆ, ಐಕ್ಯೂ ಎಸಿ ಸಂಚಾಲಕ ಡಾ. ಕುಶಾಲಪ್ಪ ಎಸ್, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ಕು. ಆಶಾಲತಾ, ಕು. ಶರಣ್ಯ, ಕು. ವಿನುತಾ, ಕು. ಅನುಷಾ, ಭರತೇಶ್ ಉಪಸ್ಥಿತರಿದ್ದರು. ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕಳೆದ ಸಾಲಿನಲ್ಲಿ ಶೈಕ್ಷಣಿಕವಾಗಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಸಾಂಸ್ಕೃತಿಕ ವಿಭಾಗದ ಸಂಚಾಲಕರಾದ ಪ್ರೊ| ಸುರೇಶ್ ವಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೈಯದ್ ಜಾಫರ್ ವಂದಿಸಿದರು. ನಂತರ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!