26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥ ಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿಯ ತೆಂಕಕಾರಂದೂರಿನ ಪ. ರಾಮಕೃಷ್ಣ ಶಾಸ್ತ್ರಿ ಅವರು ವೃತ್ತಿಯಲ್ಲಿ ಕೃಷಿಕರು, ಪ್ರವೃತ್ತಿಯಲ್ಲಿ ಸಾಹಿತಿ. ತುಳು ಮತ್ತು ಕನ್ನಡದಲ್ಲಿ ಕಥೆ-ಕಾದಂಬರಿಗಳನ್ನು ಬರೆದಿರುವ ಅವರು ವಿಜ್ಞಾನ, ಅಧ್ಯಾತ್ಮ ವೈಚಾರಿಕ ಕ್ಷೇತ್ರಗಳಲ್ಲೂ ಲೇಖನ ಬರೆದಿದ್ದಾರೆ. ಯಕ್ಷಗಾನ ತಾಳಮದ್ದಳೆಯಲ್ಲಿ ಅರ್ಥಗಾರಿಕೆ, ಗಮಕ ವಾಚನದಲ್ಲಿಯೂ ಪ್ರಸಿದ್ಧರು. ಅವರ ಬರಹಗಳು ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಮತ್ತು ಮಂಗಳೂರು ವಿವಿ ಯ ಪದವಿ ತರಗತಿಗಳಿಗೆ ಪಠ್ಯವಾಗಿದ್ದು ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.

Related posts

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು : ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya
error: Content is protected !!