September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥ ಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿಯ ತೆಂಕಕಾರಂದೂರಿನ ಪ. ರಾಮಕೃಷ್ಣ ಶಾಸ್ತ್ರಿ ಅವರು ವೃತ್ತಿಯಲ್ಲಿ ಕೃಷಿಕರು, ಪ್ರವೃತ್ತಿಯಲ್ಲಿ ಸಾಹಿತಿ. ತುಳು ಮತ್ತು ಕನ್ನಡದಲ್ಲಿ ಕಥೆ-ಕಾದಂಬರಿಗಳನ್ನು ಬರೆದಿರುವ ಅವರು ವಿಜ್ಞಾನ, ಅಧ್ಯಾತ್ಮ ವೈಚಾರಿಕ ಕ್ಷೇತ್ರಗಳಲ್ಲೂ ಲೇಖನ ಬರೆದಿದ್ದಾರೆ. ಯಕ್ಷಗಾನ ತಾಳಮದ್ದಳೆಯಲ್ಲಿ ಅರ್ಥಗಾರಿಕೆ, ಗಮಕ ವಾಚನದಲ್ಲಿಯೂ ಪ್ರಸಿದ್ಧರು. ಅವರ ಬರಹಗಳು ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಮತ್ತು ಮಂಗಳೂರು ವಿವಿ ಯ ಪದವಿ ತರಗತಿಗಳಿಗೆ ಪಠ್ಯವಾಗಿದ್ದು ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya
error: Content is protected !!