July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥ ಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿಯ ತೆಂಕಕಾರಂದೂರಿನ ಪ. ರಾಮಕೃಷ್ಣ ಶಾಸ್ತ್ರಿ ಅವರು ವೃತ್ತಿಯಲ್ಲಿ ಕೃಷಿಕರು, ಪ್ರವೃತ್ತಿಯಲ್ಲಿ ಸಾಹಿತಿ. ತುಳು ಮತ್ತು ಕನ್ನಡದಲ್ಲಿ ಕಥೆ-ಕಾದಂಬರಿಗಳನ್ನು ಬರೆದಿರುವ ಅವರು ವಿಜ್ಞಾನ, ಅಧ್ಯಾತ್ಮ ವೈಚಾರಿಕ ಕ್ಷೇತ್ರಗಳಲ್ಲೂ ಲೇಖನ ಬರೆದಿದ್ದಾರೆ. ಯಕ್ಷಗಾನ ತಾಳಮದ್ದಳೆಯಲ್ಲಿ ಅರ್ಥಗಾರಿಕೆ, ಗಮಕ ವಾಚನದಲ್ಲಿಯೂ ಪ್ರಸಿದ್ಧರು. ಅವರ ಬರಹಗಳು ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಮತ್ತು ಮಂಗಳೂರು ವಿವಿ ಯ ಪದವಿ ತರಗತಿಗಳಿಗೆ ಪಠ್ಯವಾಗಿದ್ದು ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.

Related posts

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya
error: Content is protected !!