30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥ ಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿಯ ತೆಂಕಕಾರಂದೂರಿನ ಪ. ರಾಮಕೃಷ್ಣ ಶಾಸ್ತ್ರಿ ಅವರು ವೃತ್ತಿಯಲ್ಲಿ ಕೃಷಿಕರು, ಪ್ರವೃತ್ತಿಯಲ್ಲಿ ಸಾಹಿತಿ. ತುಳು ಮತ್ತು ಕನ್ನಡದಲ್ಲಿ ಕಥೆ-ಕಾದಂಬರಿಗಳನ್ನು ಬರೆದಿರುವ ಅವರು ವಿಜ್ಞಾನ, ಅಧ್ಯಾತ್ಮ ವೈಚಾರಿಕ ಕ್ಷೇತ್ರಗಳಲ್ಲೂ ಲೇಖನ ಬರೆದಿದ್ದಾರೆ. ಯಕ್ಷಗಾನ ತಾಳಮದ್ದಳೆಯಲ್ಲಿ ಅರ್ಥಗಾರಿಕೆ, ಗಮಕ ವಾಚನದಲ್ಲಿಯೂ ಪ್ರಸಿದ್ಧರು. ಅವರ ಬರಹಗಳು ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಮತ್ತು ಮಂಗಳೂರು ವಿವಿ ಯ ಪದವಿ ತರಗತಿಗಳಿಗೆ ಪಠ್ಯವಾಗಿದ್ದು ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.

Related posts

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!