April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಉದ್ಯಮಿಗಳು ಕನಸುಗಳನ್ನು ಕಾಣಬೇಕು, ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು, ತಾಳ್ಮೆ ಇರಬೇಕು, ನೀವು ಕಂಡ ಕನಸುಗಳು ನಿಮ್ಮನ್ನು ಬೆಳಸಲು ಸಹಕಾರಿಯಾಗುತ್ತದೆ. ನಿಮ್ಮ ಬದುಕಿನಲ್ಲಿ ಕಷ್ಟಗಳು ಬಂದಾಗ ಅದನ್ನು ಸಾವಾಲಾಗಿ ಸ್ವೀಕರಿಸಬೇಕು. ದುಂದು ವೆಚ್ಚಗಳಿಂದ ಮತ್ತು ದುಶ್ಚಟಗಳಿಂದ ದೂರ ಇರಬೇಕು. ನಿಮಗೆ ನೀವು ಮಾಡುವ ಸಾಧನೆಗಳೆ ಮುಖ್ಯವಾಗಿರಬೇಕು. ರುಡ್‌ಸೆಟ್ ಸಂಸ್ಥೆಯಿಂದ ಅನೇಕ ನಿರುದ್ಯೋಗಿಗಳು ಸ್ವ ಉದ್ಯೋಗವನ್ನು ಮಾಡಿ ಉದ್ಯಮಿಗಳಾಗಿರುವುದು ತುಂಬಾ ಸಂತೋಷ ಕೊಟ್ಟಿದೆ ಎಂದು ‘ಬದುಕು ಕಟ್ಟೋಣ ಬನ್ನಿ’ ಇದರ ಸಂಚಾಲಕರು ಮತ್ತು ಉದ್ಯಮಿಗಳು ಆದ ಮೋಹನ್ ಕುಮಾರ್ ರವರು ಭಾಗವಹಿಸಿ ಶಿಬಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಕಛೇರಿ ಸಹಾಯಕರಾದ ಶ್ರೀಮತಿ ರಶ್ಮಿರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 27 ಯುವಕರು ಭಾಗವಹಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya
error: Content is protected !!