23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಉದ್ಯಮಿಗಳು ಕನಸುಗಳನ್ನು ಕಾಣಬೇಕು, ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು, ತಾಳ್ಮೆ ಇರಬೇಕು, ನೀವು ಕಂಡ ಕನಸುಗಳು ನಿಮ್ಮನ್ನು ಬೆಳಸಲು ಸಹಕಾರಿಯಾಗುತ್ತದೆ. ನಿಮ್ಮ ಬದುಕಿನಲ್ಲಿ ಕಷ್ಟಗಳು ಬಂದಾಗ ಅದನ್ನು ಸಾವಾಲಾಗಿ ಸ್ವೀಕರಿಸಬೇಕು. ದುಂದು ವೆಚ್ಚಗಳಿಂದ ಮತ್ತು ದುಶ್ಚಟಗಳಿಂದ ದೂರ ಇರಬೇಕು. ನಿಮಗೆ ನೀವು ಮಾಡುವ ಸಾಧನೆಗಳೆ ಮುಖ್ಯವಾಗಿರಬೇಕು. ರುಡ್‌ಸೆಟ್ ಸಂಸ್ಥೆಯಿಂದ ಅನೇಕ ನಿರುದ್ಯೋಗಿಗಳು ಸ್ವ ಉದ್ಯೋಗವನ್ನು ಮಾಡಿ ಉದ್ಯಮಿಗಳಾಗಿರುವುದು ತುಂಬಾ ಸಂತೋಷ ಕೊಟ್ಟಿದೆ ಎಂದು ‘ಬದುಕು ಕಟ್ಟೋಣ ಬನ್ನಿ’ ಇದರ ಸಂಚಾಲಕರು ಮತ್ತು ಉದ್ಯಮಿಗಳು ಆದ ಮೋಹನ್ ಕುಮಾರ್ ರವರು ಭಾಗವಹಿಸಿ ಶಿಬಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಕಛೇರಿ ಸಹಾಯಕರಾದ ಶ್ರೀಮತಿ ರಶ್ಮಿರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 27 ಯುವಕರು ಭಾಗವಹಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya
error: Content is protected !!