September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಉದ್ಯಮಿಗಳು ಕನಸುಗಳನ್ನು ಕಾಣಬೇಕು, ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು, ತಾಳ್ಮೆ ಇರಬೇಕು, ನೀವು ಕಂಡ ಕನಸುಗಳು ನಿಮ್ಮನ್ನು ಬೆಳಸಲು ಸಹಕಾರಿಯಾಗುತ್ತದೆ. ನಿಮ್ಮ ಬದುಕಿನಲ್ಲಿ ಕಷ್ಟಗಳು ಬಂದಾಗ ಅದನ್ನು ಸಾವಾಲಾಗಿ ಸ್ವೀಕರಿಸಬೇಕು. ದುಂದು ವೆಚ್ಚಗಳಿಂದ ಮತ್ತು ದುಶ್ಚಟಗಳಿಂದ ದೂರ ಇರಬೇಕು. ನಿಮಗೆ ನೀವು ಮಾಡುವ ಸಾಧನೆಗಳೆ ಮುಖ್ಯವಾಗಿರಬೇಕು. ರುಡ್‌ಸೆಟ್ ಸಂಸ್ಥೆಯಿಂದ ಅನೇಕ ನಿರುದ್ಯೋಗಿಗಳು ಸ್ವ ಉದ್ಯೋಗವನ್ನು ಮಾಡಿ ಉದ್ಯಮಿಗಳಾಗಿರುವುದು ತುಂಬಾ ಸಂತೋಷ ಕೊಟ್ಟಿದೆ ಎಂದು ‘ಬದುಕು ಕಟ್ಟೋಣ ಬನ್ನಿ’ ಇದರ ಸಂಚಾಲಕರು ಮತ್ತು ಉದ್ಯಮಿಗಳು ಆದ ಮೋಹನ್ ಕುಮಾರ್ ರವರು ಭಾಗವಹಿಸಿ ಶಿಬಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಕಛೇರಿ ಸಹಾಯಕರಾದ ಶ್ರೀಮತಿ ರಶ್ಮಿರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 27 ಯುವಕರು ಭಾಗವಹಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಹೊಸಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ ಗುಲಾಬಿ ಪೂಜಾರ್ತಿ, ಹರೀಶ್ ಕುಲಾಲ್ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya
error: Content is protected !!