September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

ಬೆಳ್ತಂಗಡಿ: 800 ವರ್ಷಗಳ ಇತಿಹಾಸ ಹೊಂದಿರುವ, ನಾಡಿನ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ ನಲ್ಲಿ ವರ್ಷಂಪ್ರತಿ ನಡೆಯುತ್ತಿರುವ ಉರೂಸ್ ಸಂಭ್ರಮದಲ್ಲಿ ಪ್ರತಿದಿನ ರಾತ್ರಿ ನಡೆಯುವ ಆಧ್ಯಾತ್ಮಿಕ ಕಾರ್ಯಕ್ರಮಗಳು ವಿಶೇಷ ಕಳೆ ನೀಡಿದೆ.


ಸಯ್ಯಿದ್ ಕುಂಬೋಳ್ ತಂಙಳ್, ಸಯ್ಯಿದ್ ಕೂರತ್ ತಂಙಳ್ ಮತ್ತು ಸಯ್ಯಿದ್ ಕಾಜೂರು ತಂಙಳ್ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಲ್ಲಿ ಮೇ.3ರಂದು ಕಿಲ್ಲೂರು ಖತೀಬ್ ಶಂಶೀರ್ ಸಖಾಫಿ ಧಾರ್ಮಿಕ ಪ್ರವಚನ ನೀಡಿದರು. ಮೇ 4 ರಂದು ಮುಹಮ್ಮದ್ ರಫೀಕ್ ಸಅದಿ ದೇಲಂಪಾಡಿ ಧಾರ್ಮಿಕ ಉಪನ್ಯಾಸ ನಡೆಸಿಕೊಟ್ಟರು.
ಮೇ.5 ರಂದು ಅಂತಾರಾಷ್ಟ್ರೀಯ ಖ್ಯಾತಿಯ ಹಾಡುಗಾರರಾದ ಸಯ್ಯಿದ್ ತ್ವಾಹಾ ತಂಙಳ್ ಪೂಕೊಟೂರು ಮತ್ತು ಶಹಿನ್ ಬಾಬು ಅವರ ಸಂಗಡಿಗರ ಭಾಗವಹಿಸುವಿಕೆಯಲ್ಲಿ ಪ್ರವಾದಿ ನಾಮಸಂಕೀರ್ತನೆಯ ಬುರ್ದಾ ಮಜ್ಲಿಸ್ ಹಾಗೂ ಪ್ರವಾದಿ ಮದಹ್ ಗೀತೆಗಳ ಇಶಲ್ ನೈಟ್ ನಡೆಯಿತು.


ಮೇ.6 ರಂದು, ಆನ್ಲೈನ್ ವೇದಿಕೆ ಮೂಲಕ ಧರ್ಮ ಸಂದೇಶದ ಹೊಸ ಇತಿಹಾಸ ಬರೆದಿರುವ ಅಬ್ದುಲ್ಲತೀಫ್ ಸಖಾಫಿ ಕಾಂದಪುರಂ ನೇತೃತ್ವದಲ್ಲಿ ಮದನಿಯಂ ಮಜ್ಲಿಸ್ ನಡೆಯಿತು. ಮೇ.೭ ರಂದು ಅಶ್ಪಾಕ್ ಫೈಝಿ ನಂದಾವರ ಅವರು ಧಾರ್ಮಿಕ ಪ್ರವಚನ ನೀಡಿದರು.
ಈ ಎಲ್ಲಾ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಕಾಜೂರು ವಹಿಸಿದ್ದರು.


ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಪ್ರಧಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕೋಶಾಧಿಕಾರಿ ಕೆ.ಎಮ್ ಕಮಾಲ್ ಕಾಜೂರು ಉಪಸ್ಥಿತರಿದ್ದು ಅತಿಥಿಗಳನ್ನು ಕಾಜೂರು ಪರವಾಗಿ ಅಭಿನಂದಿಸಿ ಗೌರವಿಸಿದರು. ಸಯ್ಯಿದ್ ಕಾಜೂರು ತಂಙಳ್, ಸಯ್ಯಿದ್ ಸಿದ್ದೀಕ್ ತಂಙಳ್ ತೀರ್ಥಹಳ್ಳಿ, ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ದಾರುಸ್ಸಲಾಂ, ಕಾಜೂರು ಮುದರ್ರಿಸ್ ಮುಹಮ್ಮದ್ ತೌಸೀಫ್ ಸಅದಿ ಹರೇಕಳ, ಬೆಳ್ತಂಗಡಿ ಭಾಗಿಯಾಗಿದ್ದರು. ಬೆಳ್ತಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರಮಠ, ವಕ್ಫ್ ಜಿಲ್ಲಾಧಿಕಾರಿ ಅಬೂಬಕ್ಕರ್ ಸಾಲೆತ್ತೂರು ಅವರನ್ನು ಸನ್ಮಾನಿಸಲಾಯಿತು.

Related posts

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya
error: Content is protected !!