ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

ತಣ್ಣೀರುಪoತ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ,ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು, ನೇತ್ರಾವತಿ ಹೋಟೆಲ್ ಮಾಲಕರಾದ ಧರ್ಣಪ್ಪ ಗೌಡ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಅಯೂಬ್ ಕರಾಯ, ಸೀತಾರಾಮ ಮಡಿವಾಳ, ಯಶೋಧರ ಶೆಟ್ಟಿ, ಹಾಗೂ ಶ್ರೀ ಮಾತಾ ಸುಪಾರಿ ಟ್ರೇಡರ್ಸ್ ಮಾಲಕರಾದ ಸಚಿನ್ ಗೌಡ, ಶ್ರೀದೇವಿ ಸುಪಾರಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮುಡಾಯೂರು, ಶಾರದಾ ರೈ ಮುಗೆರೋಡಿ, ಅಣ್ಣಿ ಶೆಟ್ಟಿ ಪಣೆಕ್ಕರ, ರಾಜೇಶ್ ಶೆಟ್ಟಿ ನವಶಕ್ತಿ ಉಪಸ್ಥಿತರಿದ್ದು, ಶುಭ ಹಾರೈಸಿದರು.


ನರಸಿಂಹ ಶೆಟ್ಟಿ, ಮತ್ತು ಮನೆಯವರು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.
ಅಂಗಡಿ ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ಸ್ವಾಗತಿಸಿದರು. ಕಟ್ಟಡ ಮಾಲಿಕರಾದ ಕೃಷ್ಣಪ್ಪ ಪೂಜಾರಿ ಧನ್ಯವಾದವಿತ್ತರು.


ಅಡಿಕೆ, ಗೇರುಬೀಜ, ತೆಂಗಿನಕಾಯಿ, ಕಾಳುಮೆಣಸು, ಮುಂತಾದ ಕಾಡುತ್ಪತಿಗಳನ್ನು ಖರೀದಿಸಲಾಗುವುದು ಎಂದು ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ತಿಳಿಸಿದರು.

Related posts

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya
error: Content is protected !!