23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

ತಣ್ಣೀರುಪoತ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ,ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು, ನೇತ್ರಾವತಿ ಹೋಟೆಲ್ ಮಾಲಕರಾದ ಧರ್ಣಪ್ಪ ಗೌಡ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಅಯೂಬ್ ಕರಾಯ, ಸೀತಾರಾಮ ಮಡಿವಾಳ, ಯಶೋಧರ ಶೆಟ್ಟಿ, ಹಾಗೂ ಶ್ರೀ ಮಾತಾ ಸುಪಾರಿ ಟ್ರೇಡರ್ಸ್ ಮಾಲಕರಾದ ಸಚಿನ್ ಗೌಡ, ಶ್ರೀದೇವಿ ಸುಪಾರಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮುಡಾಯೂರು, ಶಾರದಾ ರೈ ಮುಗೆರೋಡಿ, ಅಣ್ಣಿ ಶೆಟ್ಟಿ ಪಣೆಕ್ಕರ, ರಾಜೇಶ್ ಶೆಟ್ಟಿ ನವಶಕ್ತಿ ಉಪಸ್ಥಿತರಿದ್ದು, ಶುಭ ಹಾರೈಸಿದರು.


ನರಸಿಂಹ ಶೆಟ್ಟಿ, ಮತ್ತು ಮನೆಯವರು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.
ಅಂಗಡಿ ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ಸ್ವಾಗತಿಸಿದರು. ಕಟ್ಟಡ ಮಾಲಿಕರಾದ ಕೃಷ್ಣಪ್ಪ ಪೂಜಾರಿ ಧನ್ಯವಾದವಿತ್ತರು.


ಅಡಿಕೆ, ಗೇರುಬೀಜ, ತೆಂಗಿನಕಾಯಿ, ಕಾಳುಮೆಣಸು, ಮುಂತಾದ ಕಾಡುತ್ಪತಿಗಳನ್ನು ಖರೀದಿಸಲಾಗುವುದು ಎಂದು ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ತಿಳಿಸಿದರು.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಸಾಮೂಹಿಕ ವಿವಾಹ ನೋಂದಾವಣಾ ಕಛೇರಿ ಉದ್ಘಾಟನೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya
error: Content is protected !!