September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜು ಪುತ್ತೂರಿನ ಪರೀಕ್ಷಾಂಗ ಕುಲ ಸಚಿವರಾದ ಡಾ. ಶ್ರೀಧರ್ ಎಚ್ ಜಿ ಇವರು ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸಮರ್ಪಣ ಭಾವ ಹೆಚ್ಚಾದಾಗ ಜೀವನದಲ್ಲಿ ಅವರು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಹಾಗೂ ಇಂದಿನ ಆಧುನಿಕ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡಾಗ ಅವರ ಕೌಶಲ್ಯವನ್ನು ಹೆಚ್ಚಿಸಿಕೊಂಡು ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ ಎನ್ ವಹಿಸಿದ್ದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ.ಸುಬ್ರಹ್ಮಣ್ಯ ಕೆ, ಐಕ್ಯೂ ಎಸಿ ಸಂಚಾಲಕ ಡಾ. ಕುಶಾಲಪ್ಪ ಎಸ್, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ಕು. ಆಶಾಲತಾ, ಕು. ಶರಣ್ಯ, ಕು. ವಿನುತಾ, ಕು. ಅನುಷಾ, ಭರತೇಶ್ ಉಪಸ್ಥಿತರಿದ್ದರು. ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕಳೆದ ಸಾಲಿನಲ್ಲಿ ಶೈಕ್ಷಣಿಕವಾಗಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಸಾಂಸ್ಕೃತಿಕ ವಿಭಾಗದ ಸಂಚಾಲಕರಾದ ಪ್ರೊ| ಸುರೇಶ್ ವಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೈಯದ್ ಜಾಫರ್ ವಂದಿಸಿದರು. ನಂತರ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

Suddi Udaya

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!