26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥ ಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿಯ ತೆಂಕಕಾರಂದೂರಿನ ಪ. ರಾಮಕೃಷ್ಣ ಶಾಸ್ತ್ರಿ ಅವರು ವೃತ್ತಿಯಲ್ಲಿ ಕೃಷಿಕರು, ಪ್ರವೃತ್ತಿಯಲ್ಲಿ ಸಾಹಿತಿ. ತುಳು ಮತ್ತು ಕನ್ನಡದಲ್ಲಿ ಕಥೆ-ಕಾದಂಬರಿಗಳನ್ನು ಬರೆದಿರುವ ಅವರು ವಿಜ್ಞಾನ, ಅಧ್ಯಾತ್ಮ ವೈಚಾರಿಕ ಕ್ಷೇತ್ರಗಳಲ್ಲೂ ಲೇಖನ ಬರೆದಿದ್ದಾರೆ. ಯಕ್ಷಗಾನ ತಾಳಮದ್ದಳೆಯಲ್ಲಿ ಅರ್ಥಗಾರಿಕೆ, ಗಮಕ ವಾಚನದಲ್ಲಿಯೂ ಪ್ರಸಿದ್ಧರು. ಅವರ ಬರಹಗಳು ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಮತ್ತು ಮಂಗಳೂರು ವಿವಿ ಯ ಪದವಿ ತರಗತಿಗಳಿಗೆ ಪಠ್ಯವಾಗಿದ್ದು ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.

Related posts

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆ

Suddi Udaya
error: Content is protected !!