ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ: ಉದ್ಯಮಿಗಳು ಕನಸುಗಳನ್ನು ಕಾಣಬೇಕು, ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು, ತಾಳ್ಮೆ ಇರಬೇಕು, ನೀವು ಕಂಡ ಕನಸುಗಳು ನಿಮ್ಮನ್ನು ಬೆಳಸಲು ಸಹಕಾರಿಯಾಗುತ್ತದೆ. ನಿಮ್ಮ ಬದುಕಿನಲ್ಲಿ ಕಷ್ಟಗಳು ಬಂದಾಗ ಅದನ್ನು ಸಾವಾಲಾಗಿ ಸ್ವೀಕರಿಸಬೇಕು. ದುಂದು ವೆಚ್ಚಗಳಿಂದ ಮತ್ತು ದುಶ್ಚಟಗಳಿಂದ ದೂರ ಇರಬೇಕು. ನಿಮಗೆ ನೀವು ಮಾಡುವ ಸಾಧನೆಗಳೆ ಮುಖ್ಯವಾಗಿರಬೇಕು. ರುಡ್‌ಸೆಟ್ ಸಂಸ್ಥೆಯಿಂದ ಅನೇಕ ನಿರುದ್ಯೋಗಿಗಳು ಸ್ವ ಉದ್ಯೋಗವನ್ನು ಮಾಡಿ ಉದ್ಯಮಿಗಳಾಗಿರುವುದು ತುಂಬಾ ಸಂತೋಷ ಕೊಟ್ಟಿದೆ ಎಂದು ‘ಬದುಕು ಕಟ್ಟೋಣ ಬನ್ನಿ’ ಇದರ ಸಂಚಾಲಕರು ಮತ್ತು ಉದ್ಯಮಿಗಳು ಆದ ಮೋಹನ್ ಕುಮಾರ್ ರವರು ಭಾಗವಹಿಸಿ ಶಿಬಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಕಛೇರಿ ಸಹಾಯಕರಾದ ಶ್ರೀಮತಿ ರಶ್ಮಿರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 27 ಯುವಕರು ಭಾಗವಹಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Leave a Comment

error: Content is protected !!