September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಉದ್ಯಮಿಗಳು ಕನಸುಗಳನ್ನು ಕಾಣಬೇಕು, ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು, ತಾಳ್ಮೆ ಇರಬೇಕು, ನೀವು ಕಂಡ ಕನಸುಗಳು ನಿಮ್ಮನ್ನು ಬೆಳಸಲು ಸಹಕಾರಿಯಾಗುತ್ತದೆ. ನಿಮ್ಮ ಬದುಕಿನಲ್ಲಿ ಕಷ್ಟಗಳು ಬಂದಾಗ ಅದನ್ನು ಸಾವಾಲಾಗಿ ಸ್ವೀಕರಿಸಬೇಕು. ದುಂದು ವೆಚ್ಚಗಳಿಂದ ಮತ್ತು ದುಶ್ಚಟಗಳಿಂದ ದೂರ ಇರಬೇಕು. ನಿಮಗೆ ನೀವು ಮಾಡುವ ಸಾಧನೆಗಳೆ ಮುಖ್ಯವಾಗಿರಬೇಕು. ರುಡ್‌ಸೆಟ್ ಸಂಸ್ಥೆಯಿಂದ ಅನೇಕ ನಿರುದ್ಯೋಗಿಗಳು ಸ್ವ ಉದ್ಯೋಗವನ್ನು ಮಾಡಿ ಉದ್ಯಮಿಗಳಾಗಿರುವುದು ತುಂಬಾ ಸಂತೋಷ ಕೊಟ್ಟಿದೆ ಎಂದು ‘ಬದುಕು ಕಟ್ಟೋಣ ಬನ್ನಿ’ ಇದರ ಸಂಚಾಲಕರು ಮತ್ತು ಉದ್ಯಮಿಗಳು ಆದ ಮೋಹನ್ ಕುಮಾರ್ ರವರು ಭಾಗವಹಿಸಿ ಶಿಬಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಕಛೇರಿ ಸಹಾಯಕರಾದ ಶ್ರೀಮತಿ ರಶ್ಮಿರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 27 ಯುವಕರು ಭಾಗವಹಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya
error: Content is protected !!