ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಪ್ರಾಧ್ಯಾಪಕರಾದ ಡಾ. ಶರತ್ ಕುಮಾರ್ ಟಿ ಕೆ ಇವರು ಏ. 30ರಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದಿದ್ದು. ಇವರನ್ನು ಕಾಲೇಜಿನ ವಿದ್ಯಾರ್ಥಿ ವೃಂದ ಹಾಗೂ ಎಲ್ಲಾ ಅಧ್ಯಾಪಕ- ಅಧ್ಯಾಪಕೇತರ ವೃಂದದವರು ಶರತ್ ಕುಮಾರ್ ದಂಪತಿಗಳನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಇಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಪ್ರಾರಂಭಿಸಿ ನಂತರ ಸರ್ಕಾರಿ ಸೇವೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸದುರ್ಗದಲ್ಲಿ ನೇಮಕಗೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಹಾಗೂ ಬೆಳ್ತಂಗಡಿಯಲ್ಲಿ ಸುಮಾರು 37 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿಯನ್ನು ಹೊಂದಿದ್ದಾರೆ. ಶ್ರೀಯುತರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಪ್ರಾಂಶುಪಾಲರಾಗಿ ಕಾಲೇಜು ನ್ಯಾಕ್ ನಲ್ಲಿ ಉತ್ತಮ ಶ್ರೇಣಿ ಪಡೆಯಲು ಕಾರಣಿಭೂತರಾಗಿದ್ದಾರೆ.

Leave a Comment

error: Content is protected !!