July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಪ್ರಾಧ್ಯಾಪಕರಾದ ಡಾ. ಶರತ್ ಕುಮಾರ್ ಟಿ ಕೆ ಇವರು ಏ. 30ರಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದಿದ್ದು. ಇವರನ್ನು ಕಾಲೇಜಿನ ವಿದ್ಯಾರ್ಥಿ ವೃಂದ ಹಾಗೂ ಎಲ್ಲಾ ಅಧ್ಯಾಪಕ- ಅಧ್ಯಾಪಕೇತರ ವೃಂದದವರು ಶರತ್ ಕುಮಾರ್ ದಂಪತಿಗಳನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಇಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಪ್ರಾರಂಭಿಸಿ ನಂತರ ಸರ್ಕಾರಿ ಸೇವೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸದುರ್ಗದಲ್ಲಿ ನೇಮಕಗೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಹಾಗೂ ಬೆಳ್ತಂಗಡಿಯಲ್ಲಿ ಸುಮಾರು 37 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿಯನ್ನು ಹೊಂದಿದ್ದಾರೆ. ಶ್ರೀಯುತರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಪ್ರಾಂಶುಪಾಲರಾಗಿ ಕಾಲೇಜು ನ್ಯಾಕ್ ನಲ್ಲಿ ಉತ್ತಮ ಶ್ರೇಣಿ ಪಡೆಯಲು ಕಾರಣಿಭೂತರಾಗಿದ್ದಾರೆ.

Related posts

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya
error: Content is protected !!