23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜು ಪುತ್ತೂರಿನ ಪರೀಕ್ಷಾಂಗ ಕುಲ ಸಚಿವರಾದ ಡಾ. ಶ್ರೀಧರ್ ಎಚ್ ಜಿ ಇವರು ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸಮರ್ಪಣ ಭಾವ ಹೆಚ್ಚಾದಾಗ ಜೀವನದಲ್ಲಿ ಅವರು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಹಾಗೂ ಇಂದಿನ ಆಧುನಿಕ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡಾಗ ಅವರ ಕೌಶಲ್ಯವನ್ನು ಹೆಚ್ಚಿಸಿಕೊಂಡು ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ ಎನ್ ವಹಿಸಿದ್ದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ.ಸುಬ್ರಹ್ಮಣ್ಯ ಕೆ, ಐಕ್ಯೂ ಎಸಿ ಸಂಚಾಲಕ ಡಾ. ಕುಶಾಲಪ್ಪ ಎಸ್, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ಕು. ಆಶಾಲತಾ, ಕು. ಶರಣ್ಯ, ಕು. ವಿನುತಾ, ಕು. ಅನುಷಾ, ಭರತೇಶ್ ಉಪಸ್ಥಿತರಿದ್ದರು. ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕಳೆದ ಸಾಲಿನಲ್ಲಿ ಶೈಕ್ಷಣಿಕವಾಗಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಸಾಂಸ್ಕೃತಿಕ ವಿಭಾಗದ ಸಂಚಾಲಕರಾದ ಪ್ರೊ| ಸುರೇಶ್ ವಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೈಯದ್ ಜಾಫರ್ ವಂದಿಸಿದರು. ನಂತರ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ಎಪ್ರಿಲ್ 30: ಹೊಕ್ಕಾಡಿಗೋಳಿ ಶ್ರೀಮತಿ ಜಿನ್ನಮ್ಮ ಮೂಲ್ಯರ ಉತ್ತರಕ್ರಿಯೆ

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya
error: Content is protected !!