22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಬೈಲಡ್ಕ ನಿವಾಸಿ ಲಲಿತಾರವರ ಪತಿ ನಾರಾಯಣ ಮಲೆಕುಡಿಯರವರು ತಮ್ಮ ತೋಟಕ್ಕೆ ಸೊಪ್ಪು ಕಡಿಯುವ ಸಂದರ್ಭದಲ್ಲಿ ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಪ್ರಮಾಣದ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ವೆನ್ಸಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೀಗ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಫಾಧರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲು ವೈದ್ಯರು ತಿಳಿಸಿದ್ದು ಆಸ್ಪತ್ರೆಯ ವೈದ್ಯಕೀಯ ಖರ್ಚು ಸುಮಾರು ರೂ.10 ಲಕ್ಷ ಬೇಕಾಗಬಹುದು ಎಂದು ವೈದ್ಯರು ತಿಳಿಸಿರುತ್ತಾರೆ.

ಇಗಾಗಲೇ ಚಿಕಿತ್ಸೆಗೆ ಅಲ್ಲಿ ಇಲ್ಲಿ ಸಾಲ ಮಾಡಿದ್ದು ಕುಟುಂಬ ನಿರ್ವಹಣೆಗೆ ಕಷ್ಟ ಸಾಧ್ಯವಾಗಿದೆ. ಇನ್ನೂ 10 ಲಕ್ಷ ಆಸ್ಪತ್ರೆ ವೆಚ್ಚ ಭರಿಸಲು ಅಸಮರ್ಥರಾಗಿರುವ ಈ ಕುಟುಂಬಕ್ಕೆ ಆರ್ಥಿಕ ನೆರವಿನ ಅಗತ್ಯವಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಇವರ ಇಬ್ಬರು ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ನಾರಾಯಣ ಮಲೆಕುಡಿಯರವರು ಈ ಕುಟುಂಬಕ್ಕೆ ಆಧಾರವಾಗಿದ್ದು ಈ ಸಮಸ್ಯಯಿಂದ ಕುಟುಂಬದ ಆಧಾರಸ್ತಂಭ ಕುಸಿದಂತಾಗಿದೆ. ಈ ಕುಟುಂಬಕ್ಕೆ ಸಹಾಯಧನ ನೀಡಿ ಆಧಾರವಾಗಲು ಇಚ್ಚಿಸುವ ವ್ಯಕ್ತಿಗಳು ಅವರ ಪತ್ನಿಯ ಬ್ಯಾಂಕ್ ಅಕೌಂಟ್ ಗೆ ಅಥವಾ ಸ್ಯಾನರ್ ಗೆ ಆರ್ಥಿಕ ನೆರವು ಮಾಡಬಹುದಾಗಿದೆ.

Name:- Lalitha
A/c no:- 8715119001062
IFSC code:- CNRB0008715
Canara bank branch ಶಿರ್ಲಾಲು

ಸಂಪರ್ಕ ಸಂಖ್ಯೆ : 94813 61918 ಲಲಿತಾ (ಇವರ ಪತ್ನಿ)
ದಯವಿಟ್ಟು ಈ ಬಡ ಕುಟುಂಬಕ್ಕೆ ಧನ ಸಹಾಯ ಮಾಡುವ ಮೂಲಕ ಸಹಕಾರ ನೀಡಿ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya
error: Content is protected !!