July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಇಂದು ಸಂಜೆ ಚಿರನಿದ್ರೆಗೆ ಜಾರಿದ್ದು, ಅವರ ಪ್ರಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನ ನಾಳೆ ಮೇ 9ರಂದು ಬೆಳಿಗ್ಗೆ ಹಳೆಕೋಟೆಯ ಅವರ ಮನೆಯಲ್ಲಿ ನಡೆಯಲಿದೆ.

ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ ಐದು ಅವಧಿಗೆ ಸೇವೆ ಸಲ್ಲಿಸಿ, ತಾಲೂಕಿನ ಅಭಿವೃದ್ಧಿಗೆ ವಿಶೇಷ ಕೊಡುಗೆಯನ್ನು ಬಂಗೇರರು ನೀಡಿದ್ದರು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳಿಂದ ಸ್ಪರ್ಧಿಸಿ ಚುನಾಯಿತರಾದ ಏಕೈಕ ಶಾಸಕ ಬಂಗೇರರು, ರಾಜಕೀಯ, ಧಾರ್ಮಿಕ, ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಬಂಗೇರರು, ಶ್ರೀ ಗುರುದೇವ ಪದವಿ ಪೂರ್ವ ಹಾಗೂ ಪದಪಿ ಕಾಲೇಜನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ಆನೇಕ ಮಂದಿ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಿದ ಕೀರ್ತಿ ಬಂಗೇರರಿಗೆ ಸಲ್ಲುತ್ತದೆ. ಕಳೆದ ನಾಲ್ಕೈದು ತಿಂಗಳ ಹಿಂದೆ ಅಸೌಖ್ಯಕ್ಕೆ ಒಳಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರರು ಇಂದು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆಂದು ವರದಿಯಾಗಿದೆ. ಬಂಗೇರರ ಪಾರ್ಥಿವ ಶರೀರವನ್ನು ಇಂದು ರಾತ್ರಿ 3 ಗಂಟೆಗೆ ಬೆಳ್ತಂಗಡಿಯ ಹಳೆಕೋಟೆಯ ಮನೆಗೆ ತರುವ ಸಾಧ್ಯತೆಗಳಿದ್ದು, ನಾಳೆ ಬೆಳಿಗ್ಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

Related posts

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!