23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

ಬೆಳ್ತಂಗಡಿ: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾ‌ರ್ (79ವ)ಅವರು ವಿಧಿವಶರಾಗಿದ್ದಾರೆ. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಮೇ 7ರಂದು ಸಂಜೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು

.ಮೃತರು ಪತ್ನಿ ಸುಮಾ ಆರ್.ಆಚಾರ್,ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸ್ಸರ್ ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆ‌ರ್.,ಬೆಳ್ಳಾರೆ ಡಾ| ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸುಪ್ರಿಯಾ ಪಿ.ಆ‌ರ್,ಸೊಸೆ ಸುಧಾ, ಅಳಿಯಂದಿರಾದ ಕೃಷ್ಣ ಎಂ.ಬಿ.,ಜಯಪಾಲ ಹೆಚ್.ಎನ್.ಅವರನ್ನು ಅಗಲಿದ್ದಾರೆ.ಡಾ| ಪಾಲ್ತಾಡಿಯವರ ಮೃತದೇಹವನ್ನು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿರಿಸಲಾಗಿದ್ದು ಮೇ 8ರಂದು ಅಂತ್ಯ ಕ್ರಿಯೆ ನಡೆಯಲಿದೆ.

Related posts

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya
error: Content is protected !!