September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಪಾಲ್ತಾಡಿ ರಾಮಕೃಷ್ಣ ಆಚಾರ್ಯರು ಸ್ವರ್ಗಸ್ಥರಾದ ವಿಚಾರ ತಿಳಿದು ಖೇದವಾಯಿತು.

ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದು, ತುಳುವಿನ ಜಾನಪದ ಶಬ್ದಗಳನ್ನು ಹುಡುಕಿ ತುಳುವಿನ ಕಾರ್ಯಕ್ರಮಗಳಲ್ಲಿ ಅಧಿಕೃತವಾಗಿ ಉಪಯೋಗಿಸುವ ಕಲೆಯನ್ನು ಹೊಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ನೇತೃತ್ವದಲ್ಲಿ ಉಜಿರೆಯಲ್ಲಿ ನಡೆದ ವಿಶ್ವ ತುಳುಸಮ್ಮೇಳನದಲ್ಲಿ ಅತ್ಯಂತ ಮುತುವರ್ಜಿ ವಹಿಸಿ ಪಾಲ್ಗೊಂಡು ಸಮ್ಮೇಳನದ ಯಶಸ್ವಿಗಾಗಿ ಶ್ರಮಿಸಿರುತ್ತಾರೆ. ತುಳು ಸಾಹಿತ್ಯ ಹಾಗೂ ಭಾಷೆಯ ಬೆಳವಣಿಗೆಯಲ್ಲಿ ಇವರ ಪಾತ್ರ ಹಿರಿದಾಗಿದೆ. ತುಳುವಿನಲ್ಲಿ ಅತಿ ಹೆಚ್ಚಿನ ಕೃತಿಗಳನ್ನು ಪ್ರಕಟಿಸಿ ತುಳು ಮಾತೆಯ ಸೇವೆಯನ್ನು ಮಾಡಿರುತ್ತಾರೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಲ್ಲಿ ಸರಕಾರದ ಗಮನ ಸೆಳೆದಿರುತ್ತಾರೆ. ಅವರ ನಿಧನ ತುಳು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.


ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya
error: Content is protected !!