September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮೋಟಾರು ಸೈಕಲ್ ಸ್ಕಿಡ್ ಯಾಗಿ ಬಿದ್ದು ಗಾಯಗೊಂಡ ಘಟನೆ ಮೇ 6 ರಂದು ನಡೆದಿದೆ.

ರೆಖ್ಯಾ ನಿವಾಸಿ ನವೀನ್‌ ನೀಡಿದ ದೂರಿನಂತೆ ಮೇ 06 ರಂದು ನವೀನ್ ರವರ ದೊಡ್ಡಪ್ಪನ ಮಗ ಮನೀಷ್ ರವರು ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್‌ ನ ಮೋಟಾರು ಸೈಕಲ್ ಕೆಎ-21-ಇಎ-1440 ನೇಯದು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ವಿಚಾರ ತಿಳಿದಂತೆ ನವೀನ್ ಮತ್ತು ಅವರ ದೊಡ್ಡಪ್ಪ ಉಲಹನ್ನನ್ ರವರು ಸ್ಥಳಕ್ಕೆ ಹೋಗಿ ಮನೀಷ್ ರವರನ್ನು ಚಿಕಿತ್ಸೆಯ ಬಗ್ಗೆ ನೆಲ್ಯಾಡಿ ಆಶ್ವಿನಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ್ದು, ಈ ಆಪಘಾತದ ಬಗ್ಗೆ ವಿಚಾರವನ್ನು ತಿಳಿಯಲಾಗಿ ಮೇ 06 ರಂದು ಮದ್ಯಾಹ್ನ ಕೌಕ್ರಾಡಿ ಗ್ರಾಮದ ಪೆರಿಯ ಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್ ನು ಅವನ ಮೋಟಾರು ಸೈಕಲ್ ನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಸವಾರಿ ಮಾಡಿದ್ದರಿಂದ ಮೋಟಾರು ಸೈಕಲ್ ಸ್ಕಿಡ್ ಆಗಿ ಬಿದ್ದು ಗಂಭೀರ ಸ್ವರೂಪದ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ:54/2024 ಕಲಂ:279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya
error: Content is protected !!