July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ಬಂಗೇರ ಅವರು ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Related posts

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya
error: Content is protected !!