25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ. ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು. 1985 ರಲ್ಲಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಇಬ್ಬರು ಶಾಸಕರು ಮಾತ್ರ ಇದ್ದರು. ಒಬ್ಬರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಸಂತ ಬಂಗೇರ. ಕರ್ನಾಟಕದ ರಾಜಕಾರಣದಲ್ಲಿ ಬಂಗೇರ ಅವರು ಸದಾ ನೆನಪಿನಲ್ಲಿ ಉಳಿಯುವ ವ್ಯಕ್ತಿಯಾಗಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಮೋಕ್ಷ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Related posts

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!