September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ. ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು. 1985 ರಲ್ಲಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಇಬ್ಬರು ಶಾಸಕರು ಮಾತ್ರ ಇದ್ದರು. ಒಬ್ಬರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಸಂತ ಬಂಗೇರ. ಕರ್ನಾಟಕದ ರಾಜಕಾರಣದಲ್ಲಿ ಬಂಗೇರ ಅವರು ಸದಾ ನೆನಪಿನಲ್ಲಿ ಉಳಿಯುವ ವ್ಯಕ್ತಿಯಾಗಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಮೋಕ್ಷ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Related posts

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya
error: Content is protected !!