ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಕಾರ್ಯ ನಿಮಿತ್ತ ಅಯೋಧ್ಯೆಯ ಪ್ರವಾಸದಲ್ಲಿರುವ ಶ್ರೀರಾಮ ಕ್ಷೇತ್ರದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಂಗೇರ ಅವರು ಶ್ರೀರಾಮ ಕ್ಷೇತ್ರದ ಕ್ಷೇತ್ರ ಆಡಳಿತ ಮಂಡಳಿಯ ಸದಸ್ಯರಾಗಿ ಶ್ರೀರಾಮ ಕ್ಷೇತ್ರ ನಿರ್ಮಾಣದ ವೇಳೆ ನನ್ನ ಗುರುಗಳ ಜೊತೆ ಶ್ರಮಿಸಿದ್ದರು. ಶ್ರೀರಾಮ ಕ್ಷೇತ್ರದ ಅಭಿವೃದ್ಧಿಗೆ ಅವರು ತನ್ನದೇ ಆದ ಸೇವೆಯನ್ನು ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸ್ವಾಮೀಜಿಯವರು ಅಯ್ಯೋಧ್ಯೆಯಿಂದ ಹೇಳಿಕೆ ನೀಡಿದ್ದಾರೆ.

Leave a Comment

error: Content is protected !!