ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಬೆಳ್ತಂಗಡಿ:ಐದು ಬಾರಿ ಶಾಸಕರಿಗೆ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದ್ದ,ನೇರ ನಡೆ ನುಡಿಯ ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಕೆ.ವಸಂತ ಬಂಗೇರರ ನಿಧನ ನೋವು ತಂದಿದೆ.ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಬೆಳ್ತಂಗಡಿ ಹಾಗೂ ಸಂಸ್ಕಾರ ಭಾರತಿ ಬೆಳ್ತಂಗಡಿ ಘಟಕ‌ ಅಧ್ಯಕ್ಷ ಸಂಪತ್ ಬಿ ಸುವರ್ಣ ಸಂತಾಪ ಸಲ್ಲಿಸಿದ್ದಾರೆ..

Leave a Comment

error: Content is protected !!