26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಬೆಳ್ತಂಗಡಿ:ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದು ಗುರುವಾರ ಮುಂಜಾನೆ ಬೆಂಗಳೂರಿನಿಂದ ಚಾರ್ಮಾಡಿ ಮೂಲಕ   ಬೆಳ್ತಂಗಡಿಗೆ ಅವರ ಪಾರ್ಥಿವ ಶರೀರ ಆಗಮಿಸಲಿದ್ದು.   ಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಯು ಗುರುನಾರಾಯಣ ಸಭಾ ಭವನದಲ್ಲಿ ನಡೆಯಿತು.

ಬೆಳಿಗ್ಗೆ 10.30 ಗಂಟೆಗೆ ಹಳೇಕೋಟೆ  ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ  ಪಾರ್ಥಿವ ಶರೀರವನ್ನು  ತಂದು   ಸಾರ್ವಜನಿಕರಿಗೆ ತಾಲೂಕು  ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.ಸಂಜೆ ಬೆಳ್ತಂಗಡಿ ನಗರದಲ್ಲಿ   ಪಾರ್ಥಿವ ಶರೀರದ ಅಂತಿಮ ಯಾತ್ರೆಯ ಮೆರವಣಿಗೆಯು ನಡೆಸಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ..ನಂತರ    ಅಂತ್ಯ ಸಂಸ್ಕಾರ ಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ  ನಡೆಯಲಿದೆ . ಮೃತರ ಗೌರವಾರ್ಥ ನಗರದ ಹೋಟೆಲ್ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಅವರ ಅಭಿಮಾನಿಗಳು  ವಿನಂತಿಸಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ಮುಖ್ಯ ಮಂತ್ರಿ  ಉಪ ಮುಖ್ಯ ಮಂತ್ರಿ  ಸೇರಿದಂತೆ ಸಚಿವರು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

Related posts

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya
error: Content is protected !!